Webdunia - Bharat's app for daily news and videos

Install App

ಮಹದಾಯಿ ವಿವಾದ: ಹಿರಿಯ ವಕೀಲರ ಜೊತೆ ಸಚಿವ ಎಂ.ಬಿ. ಪಾಟೀಲ್‌ ಚರ್ಚೆ!

Webdunia
ಭಾನುವಾರ, 31 ಜುಲೈ 2016 (12:02 IST)
ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿ ವಜಾ ಹಿನ್ನೆಲೆಯಲ್ಲಿ ಇಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಅವರು ವಕೀಲರ ಜೊತೆ ಚರ್ಚೆ ನಡೆಸಿ, ಮುಂದಿನ ಕಾನೂನು ಹೋರಾಟದ ಕುರಿತು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
 
ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ರಾಜ್ಯದ ಪರ ವಾದ ಮಂಡಸಿದ್ದ ಮೋಹನ ಕಾತರಕಿ, ನಿಶಾಂತ್ ಪಾಟೀಲ್ ಸೇರಿದಂತೆ ಹಿರಿಯ ವಕೀಲರು ಹಾಗೂ ಅಧಿಕಾರಿಗಳ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದ್ದು, ಮುಂದಿನ ಕಾನೂನ ಹೋರಾಟದ ಕುರಿತು ನಿರ್ಧರಿಸಲಿದ್ದು, ನಂತರ ಹಿರಿಯ ವಕೀಲ ನಾರಿಮನ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು. 
 
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments