Select Your Language

Notifications

webdunia
webdunia
webdunia
webdunia

ಇಂದು ಮಹದಾಯಿ ಹೋರಾಟಗಾರರಿಗೆ ಬಿಡುಗಡೆ ಭಾಗ್ಯ..

ಇಂದು ಮಹದಾಯಿ ಹೋರಾಟಗಾರರಿಗೆ ಬಿಡುಗಡೆ ಭಾಗ್ಯ..
ಧಾರವಾಡ , ಶನಿವಾರ, 13 ಆಗಸ್ಟ್ 2016 (09:39 IST)
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ನವಲಗುಂದ ಗ್ರಾಮದ 129 ರೈತರಿಗೆ ಇಂದು ಬಿಡುಗಡೆ ಭಾಗ್ಯ ದೊರೆತಿದೆ.
 
ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ರೈತರನ್ನು ನವಲಗುಂದ ಕ್ಷೇತ್ರದ ಜೆಡಿಎಸ್ ಶಾಸಕ ಎನ್‌.ಎಚ್.ಕೋನರೆಡ್ಡಿ ಬರಮಾಡಿಕೊಂಡರು.
 
ಜಾಮೀನು ಅರ್ಜಿ ಸಲ್ಲಿಸದ ಕಾರಣ ನವಲಗುಂದ ಗ್ರಾಮದ ಒಟ್ಟು ಬಂಧಿತ ರೈತರ ಪೈಕಿ ಇಬ್ರಾಹಿಂ ಖಾನ್ ಎಂಬ ರೈತನಿಗೆ ಇಂದು ಬಿಡುಗಡೆ ಭಾಗ್ಯ ದೊರೆತಿಲ್ಲ. ಬಿಡುಗಡೆಗೊಂಡ ರೈತರು ಮೂರು ಬಸ್‌ಗಳ ಮೂಲಕ ಸ್ವಗ್ರಾಮಕ್ಕೆ ತೆರಳಲಿದ್ದಾರೆ.
 
ಹೋರಾಟದಲ್ಲಿ ಬಂಧನಕ್ಕೊಳಗಾದ ನವಲಗುಂದ ಗ್ರಾಮದ 57 ರೈತರು ಚಿತ್ರದುರ್ಗ ಜೈಲಿನಲ್ಲಿದ್ದು, ಅವರಿಗೂ ಸಹ ಇಂದು ಬಿಡುಗಡೆ ಭಾಗ್ಯ ದೊರೆತ್ತಿದ್ದು, ಜೈಲಿನಿಂದ ಬಿಡುಗಡೆಗೊಂಡಿರುವ ರೈತರು ಎರಡು ಬಸ್‌ಗಳ ಮೂಲಕ ಸ್ವಗ್ರಾಮಕ್ಕೆ ತೆರಳಲಿದ್ದಾರೆ.
 
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಜಿಎಸ್‌ಟಿ‌ಗೆ ಅನುಮೋದನೆ ನೀಡಿದ ಪ್ರಥಮ ರಾಜ್ಯ ಎನ್ನಿಸಿಕೊಂಡ ಆಸ್ಸಾಂ