Webdunia - Bharat's app for daily news and videos

Install App

ಇಂದು ಮಹದಾಯಿ ಹೋರಾಟಗಾರರಿಗೆ ಬಿಡುಗಡೆ ಭಾಗ್ಯ..

Webdunia
ಶನಿವಾರ, 13 ಆಗಸ್ಟ್ 2016 (09:39 IST)
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ನವಲಗುಂದ ಗ್ರಾಮದ 129 ರೈತರಿಗೆ ಇಂದು ಬಿಡುಗಡೆ ಭಾಗ್ಯ ದೊರೆತಿದೆ.
 
ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ರೈತರನ್ನು ನವಲಗುಂದ ಕ್ಷೇತ್ರದ ಜೆಡಿಎಸ್ ಶಾಸಕ ಎನ್‌.ಎಚ್.ಕೋನರೆಡ್ಡಿ ಬರಮಾಡಿಕೊಂಡರು.
 
ಜಾಮೀನು ಅರ್ಜಿ ಸಲ್ಲಿಸದ ಕಾರಣ ನವಲಗುಂದ ಗ್ರಾಮದ ಒಟ್ಟು ಬಂಧಿತ ರೈತರ ಪೈಕಿ ಇಬ್ರಾಹಿಂ ಖಾನ್ ಎಂಬ ರೈತನಿಗೆ ಇಂದು ಬಿಡುಗಡೆ ಭಾಗ್ಯ ದೊರೆತಿಲ್ಲ. ಬಿಡುಗಡೆಗೊಂಡ ರೈತರು ಮೂರು ಬಸ್‌ಗಳ ಮೂಲಕ ಸ್ವಗ್ರಾಮಕ್ಕೆ ತೆರಳಲಿದ್ದಾರೆ.
 
ಹೋರಾಟದಲ್ಲಿ ಬಂಧನಕ್ಕೊಳಗಾದ ನವಲಗುಂದ ಗ್ರಾಮದ 57 ರೈತರು ಚಿತ್ರದುರ್ಗ ಜೈಲಿನಲ್ಲಿದ್ದು, ಅವರಿಗೂ ಸಹ ಇಂದು ಬಿಡುಗಡೆ ಭಾಗ್ಯ ದೊರೆತ್ತಿದ್ದು, ಜೈಲಿನಿಂದ ಬಿಡುಗಡೆಗೊಂಡಿರುವ ರೈತರು ಎರಡು ಬಸ್‌ಗಳ ಮೂಲಕ ಸ್ವಗ್ರಾಮಕ್ಕೆ ತೆರಳಲಿದ್ದಾರೆ.
 
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments