ಬಿ.ಎಸ್.ಯಡಿಯೂರಪ್ಪ ವಚನಭ್ರಷ್ಟ: ಮಹಾದಾಯಿ ಪ್ರತಿಭಟನಾಕಾರರು

Webdunia
ಮಂಗಳವಾರ, 26 ಡಿಸೆಂಬರ್ 2017 (19:11 IST)
ಕಳೆದ ನಾಲ್ಕು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗಾಗಿ ಕಾದಿದ್ದ ಮಹದಾಯಿ ಪ್ರತಿಭಟನಾನಿರತ ರೈತರಿಗೆ ಕೊನೆಗೂ ಸಂಧಾನ ಸಫಲವಾಗದೆ ನಿರಾಶೆಯಾಗಿದೆ.
ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯ ಮುಂದೆ ಎದುರು ರೈತರು ನಡೆಸುತ್ತಿರುವ ಆಹೋರಾತ್ರಿ ಧರಣಿ ಮಂಗಳವಾರ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
 
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಹನುಮಂತಪ್ಪ ತೀವ್ರ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲ ರೈತರು ಕೂಡಾ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಮಹದಾಯಿ ಹೋರಾಟಗಾರರನ್ನು ಯಡಿಯೂರಪ್ಪ ಇಂದು ಸಂಜೆ ಭೇಟಿ ಮಾಡಿ ರೈತರಿಗೆ ಮನವಿ ಮಾಡಿದರು. ಆದರೆ. ಬಿಎಸ್‌ವೈ ಮನವಿಗೆ ರೈತರು ಆಕ್ರೋಶ ವ್ಯಕ್ತಪಡಿಸಿ ವಚನ ಭ್ರಷ್ಟ ಎಂದು ಕಿಡಿಕಾರಿದರು. 
 
ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಬೇಕಾಗಿದ್ದ ಕೋರ್ ಕಮಿಟಿ ಸಭೆಯನ್ನು ಕೂಡಾ ಮಹದಾಯಿ ಹೋರಾಟಗಾರರ ಪ್ರತಿಭಟನೆಯಿಂದಾಗಿ ಯಡಿಯೂರಪ್ಪ ನಿವಾಸಕ್ಕೆ ವರ್ಗಾಯಿಸಲಾಗಿತ್ತು. ಬೇಡಿಕೆ ಈಡೇರುವವರೆಗೆ ಹೋರಾಟ ನಿಲ್ಲದು ಎಂದು ರೈತ ಮುಖಂಡ ವಿರೇಶ್ ಸೊಬರದ್ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments