Select Your Language

Notifications

webdunia
webdunia
webdunia
webdunia

ಮಹಾದಾಯಿ : ಕಾನೂನು ತಜ್ಞರ ಜತೆಗೆ ಚರ್ಚಿಸಿ ಮುಂದಿನ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಮಹಾದಾಯಿ ವಿವಾದ
ಬೆಂಗಳೂರು , ಭಾನುವಾರ, 7 ಆಗಸ್ಟ್ 2016 (17:19 IST)
ಮಹಾದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತು ನಡೆದ ಸರ್ಪಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಹಿರಿಯ ವಕೀಲ ನಾರಿಮನ್ ಜತೆಗೆ ಈ ಸಂಬಂಧ ಅಗಸ್ಟ್ 16ರಂದು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು ಎಂದು ತಿಳಿದು ಬಂದಿದೆ.

 
ಮಹಾದಾಯಿ ನದಿ ನೀರು ವಿವಾದ ಬಗೆಹರಿಸಲು ನಾವೆಲ್ಲರೂ ಒಂದಾಗಿದ್ದೇವೆ, ಇಂದು ನಡೆದ ಸಭೆಯಲ್ಲಿ ಎಲ್ಲರು ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ವಿವಾದವನ್ನು ಎಲ್ಲರೂ ಒಂದಾಗಿ ಸೇರಿ ಪ್ರಾಮಾಣಿಕವಾಗಿ ಬಗೆಹರಿಸುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. 
 
ಇದೇ ವೇಳೆ ಜೆಡಿಎಸ್ ಅಧ್ಯಕ್ಷ ಕುಮಾರ ಸ್ವಾಮಿ ಮಾತನಾಡಿ, ನ್ಯಾಯಾಮಂಡಳಿ ನೀಡಿರುವ ಮಧ್ಯಂತರ ತೀರ್ಪು ಕುರಿತು ಚರ್ಚೆ ಮಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಟ ಮಾಡುವ ತೀರ್ಮಾನ ಕೈಗೊಂಡಿದ್ದೇವೆ ಎಂದರು.
 
ರೈತರ್ ವಿರುದ್ಧ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಇದೇ ತಿಂಗಳು 10ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 

Share this Story:

Follow Webdunia kannada

ಮುಂದಿನ ಸುದ್ದಿ

ಅಚ್ಚರಿಯಾದ್ರೂ ಸತ್ಯ.. ಅಮೇರಿಕಾದ ಅಧ್ಯಕ್ಷ ಒಬಾಮಾ ಮಗಳು ಹೊಟೇಲ್‌ನಲ್ಲಿ ಕೆಲಸ