Select Your Language

Notifications

webdunia
webdunia
webdunia
webdunia

ಮಹದಾಯಿ ಟ್ರಿಬ್ಯುನಲ್ ತೀರ್ಪಿನಿಂದ ತೀವ್ರವಾದ ಪೆಟ್ಟು: ದೇವೇಗೌಡ

ಮಹದಾಯಿ ಟ್ರಿಬ್ಯುನಲ್ ತೀರ್ಪಿನಿಂದ ತೀವ್ರವಾದ ಪೆಟ್ಟು: ದೇವೇಗೌಡ
ಬೆಂಗಳೂರು , ಬುಧವಾರ, 27 ಜುಲೈ 2016 (17:33 IST)
ಮಹದಾಯಿ ಟ್ರಿಬ್ಯುನಲ್ ತೀರ್ಪಿನಿಂದ ಕರ್ನಾಟಕಕ್ಕೆ ಹಿನ್ನೆಡೆ ವಿಚಾರವಾಗಿ ಇದು ತೀವ್ರವಾದ ಪೆಟ್ಟು, ಈ ತೀರ್ಪನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಸುಮಾರು ಒಂದುವರೆ ವರ್ಷ ಕೋರ್ಟ್‌ನಲ್ಲಿ ವಾದ ವಿವಾದಗಳು ನಡೆಯುತ್ತಿದ್ದವು. ಕುಡಿಯಲು ನೀರು ಬೇಕು ಎನ್ನುವುದು ಎಲ್ಲರ ಬೇಡಿಕೆಯಾಗಿತ್ತು. ಕರ್ನಾಟಕದ ಪರ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದು ತಿಳಿಸಿದರು.
 
ಮಹದಾಯಿ ನೀರು ಹಂಚಿಕೆ ವಿಚಾರವಾಗಿ ನಾನೇ ಪ್ರಧಾನಿ ಮೋದಿ ಬಳಿ ಹೋಗಿ ಮನವಿ ಮಾಡಿಕೊಂಡಿದ್ದೆ ಎಂದು ತಿಳಿಸಿದರು.
 
ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಕೈಗೆ ತೆಗೆದುಕೊಂಡು ಹೋರಾಟ ಮಾಡುವುದರಿಂದ ಪ್ರಯೋಜನೆ ಇಲ್ಲ. ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರನ್ನೊಬ್ಬರು ದೂರುವುದರಲ್ಲಿ ಅರ್ಥವಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯ: ಕರವೇ