Webdunia - Bharat's app for daily news and videos

Install App

ಅಕ್ರಮ ಮರಳುಗಾರಿಕೆ: ಹೆಚ್‌ಡಿಕೆ ಆರೋಪಕ್ಕೆ ಮಹಾದೇವಪ್ಪ ಕೆಂಡಾಮಂಡಲ

Webdunia
ಗುರುವಾರ, 18 ಡಿಸೆಂಬರ್ 2014 (15:27 IST)
ಇಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ ಗಣಿಗಾರಿಕೆ ತಾಂಡವವಾಡುತ್ತಿದ್ದು, ಅದಕ್ಕೆ ಕಾರಣ ಲೋಖೋಪಯೋಗಿ ಸಚಿವರೇ ಕಾರಣ ಎಂದು ಲೋಖೋಪಯೋಗಿ ಸಚಿವ ಹೆಚ್.ಸಿ.ಮಹಾದೇವಪ್ಪ ಅವರನ್ನು ಆರೋಪಿಸಿದರು.
 
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ಮೈಸೂರಿನ ಟಿ.ನರಸೀಪುರದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಅತಿಯಾಗಿ ನಡೆಯುತ್ತಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ಅವರ ಮಕ್ಕಳೇ ನಡೆಸುತ್ತಿದ್ದು, ಆ ಅಕ್ರಮದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಸಿ. ಮಹಾದೇವಪ್ಪ ಅವರೂ ಭಾಗಿಯಾಗಿದ್ದಾರೆ ಎಂದು ಸಭಾಧ್ಯಕ್ಷರ ಸಮ್ಮುಖದಲ್ಲಿ ಆರೋಪಿಸಿದರು.  
 
ಇದರಿಂದ ಕುಪಿತಗೊಂಡ ಸಚಿವರು, ನರಸೀಪುರ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರಬಹುದು. ಆದರೆ ಆ ಅಕ್ರಮ ಗಣಿಗಾರಿಕೆಯಲ್ಲಿ ಯಾವುದೇ ರೀತಿಯಲ್ಲಿ ಕೂದತೆಳೆಯಷ್ಟೂ ನನ್ನ ಪಾತ್ರವಿಲ್ಲ. ಒಂದು ವೇಳೆ ಕುಮಾರಸ್ವಾಮಿಯವರು ಹೇಳುತ್ತಿರುವುದು ನಿಜವೇ ಆಗಿದ್ದಲ್ಲಿ ಸೂಕ್ತ ದಾಖಲೆಗಳನ್ನು ತಂದು ಸಾಬೀತು ಪಡಿಸಲಿ. ಆರೋಪ ಸಾಬೀತಾದಲ್ಲಿ ರಾಜಕಾರಣದಿಂದ ಸಂಪೂರ್ಣವಾಗಿ ದೂರವಾಗುತ್ತೇನೆ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments