ಮಹಾದಾಯಿ ನೀರು ಬಿಡಲು ಒಂದು ಫೋನ್ ಮಾಡೋಕೆ ಆಗದವರು ಏನ್ ಪ್ರಧಾನಮಂತ್ರಿ– ಜಿ.ಪರಮೇಶ್ವರ್

Webdunia
ಗುರುವಾರ, 28 ಡಿಸೆಂಬರ್ 2017 (15:03 IST)
ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅವರಿಗೆ ಒಂದು ಫೋನ್ ಮಾಡಿ ನೀರು ಬಿಡಿ ಅಂದಿದ್ದರೆ ನೀರು ಬಿಡುತ್ತಿದ್ದರು. ಇಷ್ಟೂ ಮಾಡೋಕೆ ಆಗದವರು ಏನ್ ಪ್ರಧಾನಮಂತ್ರಿ ಎಂದು ನರೇಂದ್ರ ಮೋದಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಜಿ,ಪರಮೇಶ್ವರ ವಾಗ್ದಾಳಿ ನಡೆಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ನೀರಿನ ಸಮಸ್ಯೆ ಬಗೆಹರಿಸುವುದು ಐದು ನಿಮಿಷದ ಕೆಲಸ. ನರೇಂದ್ರಮೋದಿ ಅವರು ಪರಿಕ್ಕರ್ ಅವರಿಗೆ ಒಂದು ಫೋನ್ ಮಾಡಿದ್ದರೆ ಸಾಕಾಗಿತ್ತು. ಅಷ್ಟಕ್ಕೆ ಗೋವಾ ಮುಖ್ಯಮಂತ್ರಿ ನೀರು ಬಿಡುತ್ತಿದ್ದರು ಎಂದು ತಿಳಿಸಿದ್ದಾರೆ. 
 
ಸುಳ್ಳು ಹೇಳಿ ಓಟು ಹಾಕಿಸುತ್ತೇವೆ ಎಂದು ಯಡಿಯೂರಪ್ಪ ಹಾಗೂ ಈಶ್ವರಪ್ಪ ಹುಡುಗಾಟ ಆಡುತ್ತಿದ್ದಾರೆ. ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಪಕ್ಷದವರು ಪ್ರತಿಭಟನೆ ನಡೆಸಿದರೂ, ಕಾಂಗ್ರೆಸ್ ಪಕ್ಷದವರು ಯಾವುದೇ ಗಲಾಟೆ ಮಾಡಿಲ್ಲ. ಒಂದು ಪಕ್ಷದಿಂದ ಮತ್ತೊಂದು ಪಕ್ಷದ ಮುಂದೆ ಧರಣಿ ಮಾಡಿದ್ದನ್ನು ನಾನು ಎಂದೂ ಕೇಳಿಯೇ ಇಲ್ಲ ಎಂದಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಒಂದು ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದ ಗೋವಾ ಮುಖ್ಯಮಂತ್ರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟುಬಾರಿ ಪತ್ರ ಬರೆದರೂ ಉತ್ತರ ಏಕೆ ಕೊಟ್ಟಿಲ್ಲ? ಇದು ರಾಜಕೀಯವಲ್ಲದೆ ಮತ್ತೇನು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments