Webdunia - Bharat's app for daily news and videos

Install App

ವೈಯಾಲಿಕಾವಲ್ ಮಹಾಲಕ್ಷ್ಮಿ ಮರ್ಡರ್ ಕೇಸ್ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕಮಿಷನರ್

Krishnaveni K
ಸೋಮವಾರ, 23 ಸೆಪ್ಟಂಬರ್ 2024 (14:11 IST)
ಬೆಂಗಳೂರು: ವೈಯಾಲಿಕಾವಲ್ ನ ಮಹಾಲಕ್ಷ್ಮಿ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಹತ್ವದ ಮಾಹಿತಿ ನೀಡಿದ್ದಾರೆ.

‘ವೈಯಾಲಿಕಾವಲ್ ನಲ್ಲಿ ಮಹಿಳೆಯ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಯಾರು ಎಂಬ ಸ್ಪಷ್ಟವಾದ ಮಾಹಿತಿ ನಮಗೆ ಸಿಕ್ಕಿದೆ. ಆತನನ್ನು ಪತ್ತೆ ಹಚ್ಚಿ ಬಂಧಿಸುವ ಕಾರ್ಯ ಪ್ರಗತಿಯಲ್ಲಿದೆ. ಹೀಗಾಗಿ ಶೀಘ್ರ ಆತನ ಬಂಧನವಾಗುತ್ತದೆ. ಬಂಧನವಾದ ನಂತರ ಆತನನ್ನು ಕೂಲಂಕುಷವಾಗಿ ವಿಚಾರಣೆ ಮಾಡಿ ಹೆಚ್ಚಿನ ಮಾಹಿತಿ ಕೊಡಬಹುದು. ಆತ ಹೊರ ರಾಜ್ಯದವನು ಎಂದು ಗೊತ್ತಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ವಾಸವಿದ್ದ. ಆತನ ಪತ್ತೆಗೆ ನಾವು ಈಗ ಪ್ರಯತ್ನಗಳನ್ನು ಮಾಡುತ್ತಿದ್ದೇವೆ’ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಹತ್ಯೆ ಮಾಡಿ ಮೃತದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿಡಲಾಗಿತ್ತು. ಮೃತದೇಹ ಕೊಳೆತ ವಾಸನೆ ಬಂದಿದ್ದರಿಂದ ಅಕ್ಕಪಕ್ಕದ ನಿವಾಸಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಅದರಂತೆ ಕುಟುಂಬಸ್ಥರು ಬಂದು ನೋಡಿದಾಗ ಹತ್ಯೆಯಾಗಿರುವುದು ಗೊತ್ತಾಗಿದೆ.

ಇದೀಗ ಪೊಲೀಸರು ಮಹಾಲಕ್ಷ್ಮಿ ನಿಕಟವರ್ತಿಗಳನ್ನು ವಿಚಾರಣೆ ನಡೆಸಿದ್ದು, ಆಕೆಯ ಜೊತೆಗೆ ಆಪ್ತನಾಗಿದ್ದವನೇ ಮರ್ಡರ್ ಮಾಡಿದ್ದಾನೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು, ಹತ್ಯೆ ಮಾಡಿದ ಬಳಿಕ ಆಕೆಯ ಮೃತದೇಹವನ್ನಿಟ್ಟಿದ್ದ ಫ್ರಿಡ್ಜ್ ನ್ನು ಈಗ ಎಫ್ಎಸ್ಎಲ್ ವರದಿಗಾಗಿ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments