Webdunia - Bharat's app for daily news and videos

Install App

Mahalakshmi Murder Case: ಹತ್ಯೆ ಹಿಂದಿನ ಕಾರಣ ಬಯಲು

Sampriya
ಗುರುವಾರ, 26 ಸೆಪ್ಟಂಬರ್ 2024 (18:40 IST)
ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ನಡೆದ ಭೀಕರ ಮಹಾಲಕ್ಷ್ಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟದತ್ತ ತಲುಪಿದೆ. ಪ್ರಕರಣ ಹಂತಕ ರಂಜನ್ ಕೂಡಾ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಡೆತ್‌ನೋಟ್‌ನಲ್ಲಿ ಹತ್ಯೆಗೆ ಕಾರಣ ಹಾಗೂ ಮಹಾಲಕ್ಷ್ಮೀ ಜತೆಗಿದ್ದ ಸಂಬಂಧದ ಬಗ್ಗೆ ರಂಜಾನ್ ಉಲ್ಲೇಖಿಸಿದ್ದಾನೆ.

ಪೊಲೀಸರ ತನಿಖೆ ವೇಳೆ ರಂಜನ್ ಹಾಗೂ ಮಹಾಲಕ್ಷ್ಮೀ ಒಂದೇ ಶೋರೂಂನಲ್ಲಿ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ಶೋ ರೂಂನಲ್ಲಿ ಪರಿಚಯವಾದ ಇವರಿಬ್ಬರಲ್ಲಿ ಸ್ನೇಹವಾಗಿ ನಂತರ ಕೆಲ ದಿನಗಳಿಂದ ಸಂಬಂಧ ಹೊಂದಿದ್ದರು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 2 ರಂದು, ತನ್ನ ವಾರದ ರಜೆಯನ್ನು ಹೊಂದಿದ್ದ ಮಹಾಲಕ್ಷ್ಮಿ, ಪ್ರತಿ ದಿನದಂತೆ ಮುಕ್ತಿ ರಂಜನ್ ರಾಯ್‌ನನ್ನು ಭೇಟಿಯಾಗುತ್ತಿದ್ದಳು. ಇನ್ನೂ ಭೇಟಿ ಸಂದರ್ಭ ತನ್ನನ್ನು ಮದುವೆಯಾಗುವಂತೆ ರಂಜಾನ್‌ಗೆ ಒತ್ತಾಯಿಸಿದ್ದಾಳೆ. ಮಾತು ಅತಿರೇಖಕ್ಕೆ ತಿರುಗಿ, ಮಹಾಲಕ್ಷ್ಮಿ ರಂಜನ್ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಕೋಪಗೊಂಡ ರಂಜನ್ ಆಕೆಯನ್ನು ಉಸಿರುಗಟ್ಟಿಸಿ ಕೊಂದು, ನಂತರ ಆಕೆಯ ದೇಹವನ್ನು ತುಂಡರಿಸಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿ ಇಟ್ಟಿದ್ದಾನೆ.

ಇನ್ನೂ ದೂರವಾಗಿರುವ ಪತಿಯೂ ಈ ಹಿಂದೆ ಮಹಾಲಕ್ಷ್ಮೀ ಮೇಲೆ ದೂರನ್ನು ನೀಡಿದ್ದಾರೆ. ಹಣ ನೀಡಲು ನಿರಾಕರಿಸಿದ್ದಕ್ಕೆ ಮಹಾಲಕ್ಷ್ಮೀ ತನ್ನ ಮೇಲೆ ಹಲ್ಲೆ ಮಾಡಿರುವುದಾಗಿ ಆಕೆಯ ಪತಿ ಹೇಮಂತ್ ದೂರನ್ನು ನೀಡಿದ್ದರು.

ಕಳೆದ 9 ತಿಂಗಳಿನಿಂದ ಮಹಾಲಕ್ಷ್ಮಿ ಪತಿಯಿಂದ ದೂರವಾಗಿ ಒಬ್ಬಂಟಿಯಾಗಿ ವಾಸವಾಗಿದ್ದಳು. ಇನ್ನು ಹತ್ಯೆ ಪ್ರಕರಣ ಆಕೆಯ ಪತಿ ಹೇಮಂತ್ ಅವರು ಅಶ್ರಫ್ ಎಂಬಾತನ ಮೇಲೆ ಶಂಕೆ ವ್ಯಕ್ತಪಡಿಸಿದ್ದರು. ಮಹಾಲಕ್ಷ್ಮೀ ಈ ಹಿಂದೆ ಅಶ್ರಫ್ ಜತೆ ಒಡನಾಟದಲ್ಲಿದ್ದರು. ಈ ವಿಚಾರವಾಗಿ ಈ ಹಿಂದೆ ನಾನು ದೂರನ್ನು ನೀಡಿದ್ದೆ ಎಂದರು.

ಅಶ್ರಫ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಕಳೆದ ಒಂದು ವರ್ಷದಿಂದ ಆಕೆಯ ಸಂಪರ್ಕದಿಂದ ದೂರವಾಗಿರುವುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments