Select Your Language

Notifications

webdunia
webdunia
webdunia
webdunia

ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ : ಸತೀಶ್ ಜಾರಕಿಹೊಳಿ

ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ , ಸೋಮವಾರ, 19 ಡಿಸೆಂಬರ್ 2022 (11:08 IST)
ಬೆಳಗಾವಿ : ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಬಹುಜನ ಸಮಾಜದ ನಾಯಕರಾಗಿದ್ದರು.

ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ತಾಲೂಕಿನ ಹೊನಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿಶೇಷ ಗೌರವ ಇದೆ.

ಮೊದಲು ಕರ್ನಾಟಕ ಮಹಾರಾಷ್ಟ್ರ ಅಂತಾ ಇರಲಿಲ್ಲ. ಬೆಂಗಳೂರಿನವರೆಗೂ ಛತ್ರಪತಿ ಶಿವಾಜಿ ಮಹಾರಾಜರು ಆಳ್ವಿಕೆ ನಡೆಸಿದ್ದರು. ನಮ್ಮ ಸರ್ಕಾರ ಇದ್ದಾಗ ಬೆಳಗಾವಿಯಲ್ಲಿಯೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಒಂದು ಕೋಟಿ ಮೀಸಲು ಇಟ್ಟಿದ್ದೇವೆ. ಆದಷ್ಟು ಬೇಗ ಆ ಪ್ರತಿಮೆ ಲೋಕಾರ್ಪಣೆ ಆಗಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ ಗ್ಯಾಂಗ್ ರೇಪ್!