ಮಾ.01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ

Webdunia
ಸೋಮವಾರ, 28 ಫೆಬ್ರವರಿ 2022 (21:03 IST)
ತಾಲ್ಲೂಕಿನ ಭಾಗಮಂಡಲ ಶ್ರೀ,ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರೂಢಿ ಸಂಪ್ರದಾಯದಂತೆ ಮಾರ್ಚ್, 01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ನಡೆಯಲಿದೆ. 
       ಮಾರ್ಚ್, 01 ರಂದು ಬೆಳಗ್ಗೆ 7 ಗಂಟೆಗೆ ಶತರುದಾಭಿಷೇಕ, ಬೆಳಗ್ಗೆ 8 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ರುದ್ರಹೋಮದ ಪೂರ್ಣಾಹುತಿ, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ ಬಲಿ ಮತ್ತು ಪ್ರಸಾದ ವಿತರಣೆ, ಸಂಜೆ 5.30 ಗಂಟೆಗೆ ತಾಯಂಬಕ ಸೇವೆ, ಸಂ.6 ಗಂಟೆಗೆ ದೀಪಾರಾಧನೆ, ಸಂ.6.30 ಗಂಟೆಗೆ ಏಕದಶ ರುದ್ರಾಭಿಷೇಕ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ರಾ.10 ಗಂಟೆಗೆ ತ್ರಿವೇಣಿ ಸಂಗಮದಲ್ಲಿ ಕಟ್ಟೆ ಪೂಜೆ ಮತ್ತು ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. 
        ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭಕ್ತಾಧಿಗಳು ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಭಕ್ತಾಧಿಗಳು ಸ್ವ ಇಚ್ಛೆಯಿಂದ ದೇವಾಲಯದ ವತಿಯಿಂದ ನಡೆಯಲಿರುವ ಕಾರ್ಯಕ್ರಮಗಳ ಪ್ರಾಯೋಜಕತ್ವನ್ನು ಪಡೆಯಲು ಇಚ್ಛಿಸಿದಲ್ಲಿ, ತಗಲುವ ವೆಚ್ಚವನ್ನು ತಾವೇ ಭರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗೆ 9972973770 ನ್ನು ಸಂಪರ್ಕಿಸಬಹುದು ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments