ಮಾ.01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ

Webdunia
ಸೋಮವಾರ, 28 ಫೆಬ್ರವರಿ 2022 (21:03 IST)
ತಾಲ್ಲೂಕಿನ ಭಾಗಮಂಡಲ ಶ್ರೀ,ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರೂಢಿ ಸಂಪ್ರದಾಯದಂತೆ ಮಾರ್ಚ್, 01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ನಡೆಯಲಿದೆ. 
       ಮಾರ್ಚ್, 01 ರಂದು ಬೆಳಗ್ಗೆ 7 ಗಂಟೆಗೆ ಶತರುದಾಭಿಷೇಕ, ಬೆಳಗ್ಗೆ 8 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ರುದ್ರಹೋಮದ ಪೂರ್ಣಾಹುತಿ, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ ಬಲಿ ಮತ್ತು ಪ್ರಸಾದ ವಿತರಣೆ, ಸಂಜೆ 5.30 ಗಂಟೆಗೆ ತಾಯಂಬಕ ಸೇವೆ, ಸಂ.6 ಗಂಟೆಗೆ ದೀಪಾರಾಧನೆ, ಸಂ.6.30 ಗಂಟೆಗೆ ಏಕದಶ ರುದ್ರಾಭಿಷೇಕ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ರಾ.10 ಗಂಟೆಗೆ ತ್ರಿವೇಣಿ ಸಂಗಮದಲ್ಲಿ ಕಟ್ಟೆ ಪೂಜೆ ಮತ್ತು ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. 
        ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭಕ್ತಾಧಿಗಳು ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಭಕ್ತಾಧಿಗಳು ಸ್ವ ಇಚ್ಛೆಯಿಂದ ದೇವಾಲಯದ ವತಿಯಿಂದ ನಡೆಯಲಿರುವ ಕಾರ್ಯಕ್ರಮಗಳ ಪ್ರಾಯೋಜಕತ್ವನ್ನು ಪಡೆಯಲು ಇಚ್ಛಿಸಿದಲ್ಲಿ, ತಗಲುವ ವೆಚ್ಚವನ್ನು ತಾವೇ ಭರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗೆ 9972973770 ನ್ನು ಸಂಪರ್ಕಿಸಬಹುದು ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಹೇಳಿಕೆಯಿಲ್ಲದ ಮದುವೆಗೆ ಬಂದರೂ ಬಿಟ್ಟಿ ತಿನ್ನಲಿಲ್ಲ, ವಿಶೇಷ ಚೇತನ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಮುಂದಿನ ಸುದ್ದಿ
Show comments