ಮಹಾತ್ಮ ಗಾಂಧೀಜಿ ಮಾರ್ಗದಲ್ಲಿ ದೇಶ ಸುಭಿಕ್ಷವಾಗಿ ಮುನ್ನಡೆಯಲಿದೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಶನಿವಾರ, 2 ಅಕ್ಟೋಬರ್ 2021 (21:57 IST)
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಚಿಂತನೆಗಳು ಹಾಗೂ ಆದರ್ಶಗಳು ನಮಗೆ ಮಾದರಿಯಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ದೇಶ ಸುಭಿಕ್ಷವಾಗಿ ಮುನ್ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿರುವ ಗಾಂಧೀಜಿ ಹಾಗೂ ಶಾಸ್ತ್ರಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಗಾಂಧೀಜಿಯವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವ ಮೂಲಕ ಕರ್ನಾಟಕದ ಜೊತೆ ಅತ್ಯಂತ ನಿಕಟ ಸಂಪರ್ಕವನ್ನು ಹೊಂದಿದ್ದರು ಎಂದರು.
ಸತ್ಯ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟು ಇಡೀ ವಿಶ್ವಕ್ಕೆ ಮಾದರಿಯಾದವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರು. ಅವರು ನುಡಿದಂತೆ ನಡೆದು ಇತರರಿಗೂ ಪ್ರೇರಣೆಯಾದವರು. ಬ್ರಿಟಿಷರ ವಿರುದ್ದ ಹೋರಾಟ ನಡೆಸಲು ಅವರು ಕಂಡುಕೊಂಡಿದ್ದು ಅಹಿಂಸೆಯ ಮಾರ್ಗ.  ಹೀಗಾಗಿಯೇ ವಿಶ್ವದೆಲ್ಲೆಡೆ ರಾಷ್ಟ್ರಪಿತನಿಗೆ ಅತ್ಯಂತ ಉನ್ನತ ಸ್ಥಾನಮಾನವಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದಿನ ಜನತೆ ನಡೆಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ನನ್ನ ಕಲ್ಪನೆಯ ಭಾರತ ಹೇಗಿರಬೇಕೆಂದು ಮಹಾತ್ಮಗಾಂಧಿಯವರು ಅನೇಕ ಕನಸುಗಳನ್ನು ಕಂಡಿದ್ದರು. ಗ್ರಾಮಗಳು ಉದ್ಧಾರವಾದರೆ ಮಾತ್ರ ಭಾರತ ಅಭಿವೃದ್ಧಿಯಾಗಲಿದೆ. ದುಡಿಯುವ ಕೈಗಳಿಗೆ ಕೆಲಸ ಸಿಕ್ಕರೆ ಪ್ರತಿಯೊಬ್ಬರು ಸ್ವಾಲಂಬಿಗಳಾಗುತ್ತಾರೆ ಎಂದು  ಭಾವಿಸಿದ್ದರು ಎಂದರು.
ಮಹಾತ್ಮ ಗಾಂಧಿಯವರಂತೆ ಮಾಜಿ ಪ್ರಧಾನಿ ಲಾಲ್‍ಬಹುದ್ದೂರ್ ಶಾಸ್ತ್ರಿ ಕೂಡ ದೇಶ ಕಂಡ ಸರಳ, ಸಜ್ಜನಿಕೆ ಮತ್ತು ಸೂಕ್ಷ್ಮತೆಯ ಅಪರೂಪದ ರಾಜಕಾರಣಿ. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಅವರು ಎಂದು ಕೊಂಡಾಡಿದರು. ಆದರ್ಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡಿದ್ದ ಅವರು ರೈಲ್ವೆ ಸಚಿವರಾಗಿದ್ದ ವೇಳೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ಸಜ್ಜನ ರಾಜಕಾರಣಿಯನ್ನು ಕಾಣುವುದೇ ಅಪರೂಪ ಎಂದರು.
ಸ್ವಾಭಿಮಾನದ ಕಿಚ್ಚ ಹಚ್ಚಿದ ಧೀಮಂತರು:
ಜೈ ಜವಾನ್, ಜೈ ಕಿಸಾನ್ ಘೋಷಣೆ ಮಾಡುವ ಮೂಲಕ ರೈತರು ಮತ್ತು ಸೈನಿಕರಲ್ಲಿ ಸ್ವಾಭಿಮಾನದ ಕಿಚ್ಚನ್ನು ಹಚ್ಚಿದ್ದರು. ಲಾಲ್‍ಬಹುದ್ದೂರ್ ಶಾಸ್ತ್ರಿ ಕೂಡ ಕರ್ನಾಟಕದ ಜತೆ ಅವಿನಾಭಾವ ಸಂಬಂಧ ಇಟ್ಟುಕೊಂಡಿದ್ದರು. ಆಲಮಟ್ಟಿ ಜಲಾಶಯ ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಅವರೇ ಕಾರಣೀಭೂತರು ಎಂದು ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments