Select Your Language

Notifications

webdunia
webdunia
webdunia
webdunia

ಆಪರೇಷನ್ ಕಮಲಕ್ಕೆ ಒಳಗಾಗಿದ್ರಾ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ. ಈ ಬಗ್ಗೆ ಅವರು ಹೇಳಿದ್ದೇನು?

ಆಪರೇಷನ್ ಕಮಲಕ್ಕೆ ಒಳಗಾಗಿದ್ರಾ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ. ಈ ಬಗ್ಗೆ ಅವರು ಹೇಳಿದ್ದೇನು?
ಬೆಳಗಾವಿ , ಶುಕ್ರವಾರ, 25 ಜನವರಿ 2019 (10:59 IST)
ಬೆಳಗಾವಿ : ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ನ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರು ಗುರುವಾರ ರಾತ್ರಿ ಕ್ಷೇತ್ರದಲ್ಲಿ ದಿಢೀರ್ ಆಗಿ ಪ್ರತ್ಯಕ್ಷರಾಗಿದ್ದಾರೆ.


ಆ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ಆಪರೇಷನ್ ಕಮಲಕ್ಕೆ ಒಳಗಾಗಿದ್ದೇನೆ ಎನ್ನುವುದು ಕೇವಲ ಉಹಾ ಪೋಹ. ನಾನು ಕಾಂಗ್ರೆಸ್‍ನಲ್ಲಿಯೇ ಇರುತ್ತೇನೆ. ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ಕಾಂಗ್ರೆಸ್‍ನಿಂದ. ಹೀಗಾಗಿ ಪಕ್ಷವನ್ನು ಬಿಟ್ಟು ಹೋಗುವ ವಿಚಾರವನ್ನು ಮಾಡಿಲ್ಲ’ ಎಂದು ಹೇಳಿದ್ದಾರೆ.


ಅಲ್ಲದೇ  ಸಿಎಲ್‍ಪಿ ಸಭೆಗೆ ಗೈರು ಆಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ‘ನನಗೆ ಬ್ಯಾಕ್ ಪೇನ್ ಕಾಣಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಸಿಎಲ್‍ ಪಿ ಸಭೆ ನಿಗಧಿಯಾಗುವ ಮುನ್ನವೇ ಮುಂಬೈಗೆ ಟಿಕೇಟ್ ಬುಕ್ ಮಾಡಿದ್ದೆ. ಚಿಕಿತ್ಸೆಗೆ ಪಡೆಯಲು ಹೋಗುವುದು ಅನಿವಾರ್ಯವಾಗಿದ್ದರಿಂದ ಪಕ್ಷದ ನಾಯಕರಿಗೆ ಪತ್ರ ಕೂಡ ಬರೆದಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಡೆ ತೊಳೆಸಲು ಹೇಳಿದ ಪ್ರಯಾಣಿಕನ ಕಂಡು ದಂಗಾದ ಗಗನಸಖಿಯರು ಆಮೇಲೆ ಮಾಡಿದ್ದೇನು ಗೊತ್ತಾ?