Webdunia - Bharat's app for daily news and videos

Install App

ಸಚಿವ ಸ್ಥಾನಕ್ಕೆ ಮಹೇಶ್ ರಾಜೀನಾಮೆ: ರೇವಣ್ಣ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 12 ಅಕ್ಟೋಬರ್ 2018 (11:29 IST)
ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ‌ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಹೆಚ್.ಡಿ.ಕುಮಾರಸ್ವಾಮಿಗೆ ಬೆಂಬಲ‌ ನೀಡೋದಾಗಿ ಅವರೇ ಹೇಳಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಯಾರೂ ಗಾಬರಿಪಡಬೇಕಿಲ್ಲ ಎಂದಿರುವ ಅವರು, ಬೆಂಗಳೂರಿಗೆ ಹೋಗಿ ಮಾಹಿತಿ ತಿಳಿದು ಹೇಳುತ್ತೇನೆ. ಎನ್.ಮಹೇಶ್ ನೀಡಿರುವ ರಾಜೀನಾಮೆ ಅದು ಅವರ ಪಕ್ಷದ ತೀರ್ಮಾನ ಇರಬಹುದು. ಅವರು ನೀಡಿರುವ ರಾಜಿನಾಮೆಯನ್ನು ಸಿಎಂ ಅಂಗೀಕರಿಸುತ್ತಾರೋ ಅಥವಾ ಮಾಯಾವತಿ ಜೊತೆ ಮಾತನಾಡುತ್ತಾರೊ ಎನೋ ಗೊತ್ತಿಲ್ಲ ಎಂದರು.

ಮೊದಲಬಾರಿ‌ ಗೆದ್ದು ಸಚಿವರಾಗಿರುವ ಎನ್.ಮಹೇಶ್, ಒಳ್ಳೆಯ ರಾಜಕಾರಣಿಯಾಗಿದ್ದಾರೆ ಎಂದು ಹಾಸನದಲ್ಲಿ ‌ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಅವರು ರಾಜೀನಾಮೆ ನೀಡಬಾರದು. ಸರಕಾರದಲ್ಲಿ ಮುಂದುವರೆಯಿರಿ ಎಂದು ನಾವು ಹೇಳುತ್ತೇವೆ. ಅವರು ಏಕೆ‌ ರಾಜೀನಾಮೆ ನೀಡಿದ್ದಾರೊ ಗೊತ್ತಿಲ್ಲ ಎಂದು ಸಚಿವ ರೇವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments