ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಾಸ್ಕ್ಮ್ಯಾನ್ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಮನೆ ತೋಟದ ಮಣ್ಣನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಾಸ್ಕ್ಮ್ಯಾನ್ ಚಿನ್ನಯ್ಯ ತಂದಿದ್ದ ಬುರುಡೆಯ ಮಣ್ಣನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ. ಈ ಸಂಬಂಧ ತಿಮರೋಡಿ ಮನೆಯ ರಬ್ಬರ್ ತೋಟದ ಮಣ್ಣನ್ನು ವಶಕ್ಕೆ ಪಡೆದು ಆ ಮಣ್ಣಿಗೂ ಇದಕ್ಕೂ ತಾಳೆಯಾಗುತ್ತಾ ಎಂಬ ಅಂಶವನ್ನು ಕಂಡುಕೊಳ್ಳಲು ಎಫ್ಎಸ್ಎಲ್ಗೆ ಕಳುಹಿಸಲಾಗಿದೆ.
ಒಂದು ವೇಳೆ ಎರಡು ಮಣ್ಣು ತಾಳೆಯಾದಲ್ಲಿ ಈ ಪ್ರಕರಣ ಸ್ಫೋಟಕ ತಿರುವು ಪಡೆದುಕೊಳ್ಳಲಿದೆ.
ಈಗಾಗಲೇ ಎಸ್ಐಟಿ ತಂಡ ಪ್ರಕರಣ ಸಂಬಂಧ ವಶಕ್ಕೆ ಪಡೆದ ಸಾಕ್ಷ್ಯಗಳ ದಾಖಲೆ ಪರಿಶೀಲನೆ ನಡೆಸುತ್ತಿದೆ.