Select Your Language

Notifications

webdunia
webdunia
webdunia
webdunia

ಯಾವುದೇ ಕಾರಣಕ್ಕು ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ: ಪ್ರತಾಪ ಸಿಂಹ

Pratap Simha

Sampriya

ಮೈಸೂರು , ಶುಕ್ರವಾರ, 13 ಸೆಪ್ಟಂಬರ್ 2024 (14:59 IST)
Photo Courtesy X
ಮೈಸೂರು: ಮಹಿಷಾ ದಸರಾ ಮಾಡಲು ಬಯಸುವವರ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಂಸದ ಆಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ ಇರಲಿ. ಆದರೆ ನಾನು ಮಾತ್ರ ಮಹಿಷಾ ದಸರಾ ಮಾಡಲು ಬಿಡುವುದಿಲ್ಲ ಎಂದರು.

ಮಹಿಷಾ ದಸರಾ ಮಾಡುವವರು ಅವರ ಮನೆಗಳಲ್ಲಿ ಮಾಡಿ, ಪ್ರಾರ್ಥಿಸಿಕೊಳ್ಳಲಿ. ನಮಗೆ ಮಹಿಷನಂತಹ ಮಕ್ಕಳೇ ಹುಟ್ಟಲಿ ಎಂದು ದಿನವೂ ಪೂಜಿಸಲಿ. ಅದಕ್ಕೆ ನಮ್ಮದೇನೂ ವಿರೋಧವಿಲ್ಲ ಎಂದು ಹೇಳಿದರು.

ಇನ್ನೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್‌ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದೆ ನಡೆಯುವ ಗಣೇಶ ಮೂರ್ತಿಗಳ ಮೆರವಣಿಗಳಲ್ಲಿ ನಾವೂ (ಹಿಂದೂಗಳು) ಕೈಯಲ್ಲಿ ಪೆಟ್ರೋಲ್ ಬಾಂಬ್ ಹಾಗೂ ತಲ್ವಾರ್‌ಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ‌. ಆಗ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶಕ್ಕೆ ಹೋಗೋದು, ಭಾರತ ವಿರೋಧಿಗಳಿಗೆ ಶೇಕ್ ಹ್ಯಾಂಡ್ ಮಾಡೋದೇ ರಾಹುಲ್ ಗಾಂಧಿ ಕೆಲಸ