Webdunia - Bharat's app for daily news and videos

Install App

ಯಾವುದೇ ಕಾರಣಕ್ಕು ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ: ಪ್ರತಾಪ ಸಿಂಹ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (14:59 IST)
Photo Courtesy X
ಮೈಸೂರು: ಮಹಿಷಾ ದಸರಾ ಮಾಡಲು ಬಯಸುವವರ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಂಸದ ಆಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ ಇರಲಿ. ಆದರೆ ನಾನು ಮಾತ್ರ ಮಹಿಷಾ ದಸರಾ ಮಾಡಲು ಬಿಡುವುದಿಲ್ಲ ಎಂದರು.

ಮಹಿಷಾ ದಸರಾ ಮಾಡುವವರು ಅವರ ಮನೆಗಳಲ್ಲಿ ಮಾಡಿ, ಪ್ರಾರ್ಥಿಸಿಕೊಳ್ಳಲಿ. ನಮಗೆ ಮಹಿಷನಂತಹ ಮಕ್ಕಳೇ ಹುಟ್ಟಲಿ ಎಂದು ದಿನವೂ ಪೂಜಿಸಲಿ. ಅದಕ್ಕೆ ನಮ್ಮದೇನೂ ವಿರೋಧವಿಲ್ಲ ಎಂದು ಹೇಳಿದರು.

ಇನ್ನೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್‌ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದೆ ನಡೆಯುವ ಗಣೇಶ ಮೂರ್ತಿಗಳ ಮೆರವಣಿಗಳಲ್ಲಿ ನಾವೂ (ಹಿಂದೂಗಳು) ಕೈಯಲ್ಲಿ ಪೆಟ್ರೋಲ್ ಬಾಂಬ್ ಹಾಗೂ ತಲ್ವಾರ್‌ಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ‌. ಆಗ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments