Select Your Language

Notifications

webdunia
webdunia
webdunia
webdunia

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಸನದಲ್ಲಿ ಬಂಧನ

Praveen Nettaru

Sampriya

ಮಂಗಳೂರು , ಶುಕ್ರವಾರ, 10 ಮೇ 2024 (15:08 IST)
Photo Courtesy X
Photo Courtesy X
ಮಂಗಳೂರು: ದೇಶದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿಯಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮೂಲಗಳು ತಿಳಿಸಿವೆ.

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರನ್ನು 2022ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಬಂದ್ ಮಾಡಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದದ್ದರಿಂದ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ದೇಶದಾದ್ಯಂತ ಈ ಪ್ರಕರಣ ಸಂಚಲನ ಮೂಡಿಸಿ, ಪ್ರಕರಣವನ್ನು ಎನ್‌ಐಎಗೆ ವಹಿಸಲಾಗಿತ್ತು. ಈಗಾಗಲೇ ಪ್ರಕರಣ ಸಂಬಂಧ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 21 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಸಿದ್ದರಾಮಯ್ಯ ಪ್ರಚಾರದ ಟ್ರಿಕ್ ಹೀಗಿತ್ತು