Select Your Language

Notifications

webdunia
webdunia
webdunia
webdunia

ಲೀಡಿಂಗ್ ನಾಯಕರ ಓಪನಿಂಗ್ ಹೇಗಿದೆ?

ಲೀಡಿಂಗ್ ನಾಯಕರ ಓಪನಿಂಗ್ ಹೇಗಿದೆ?
ಬೆಂಗಳೂರು , ಮಂಗಳವಾರ, 15 ಮೇ 2018 (08:08 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆ ಸಾಧಿಸಿದ್ದಾರೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್, ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ, ರಾಮನಗರದಲ್ಲಿ ಎಚ್ ಡಿ ಕುಮಾರಸ್ವಾಮಿ, ಕರುಣಾಕರ ರೆಡ್ಡಿ, ಎಚ್ ಡಿ ರೇವಣ್ಣ ಮುಂತಾದವರು ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ವಿಶೇಷವೆಂದರೆ ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಕ್ಷೇತ್ರದ ಬಗ್ಗೆ ಜನರ ಕುತೂಹಲ ಹೆಚ್ಚಿದೆ. ಇನ್ನು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್, ಹಳಿಯಾಲದಲ್ಲಿ ಆರ್ ವಿ ದೇಶಪಾಂಡೆ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ, ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ, ಬಂಟ್ವಾಳದಲ್ಲಿ ರಮಾನಾಥ ರೈ ಮುಂತಾದವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇವಿಎಂ ಮಶಿನ್ ಮತ್ತು ವಿವಿಪ್ಯಾಟ್ ಗಳನ್ನ ಹೊಂದಾಣಿಕೆ ಮಾಡುವಂತೆ ಕೋರಿ ಮುಖ್ಯ ಚುಣಾವಣಾಧಿಕಾರಿಗಳಲ್ಲಿ ಕಾಂಗ್ರೆಸ್ ನಾಯಕರ ಮನವಿ