Select Your Language

Notifications

webdunia
webdunia
webdunia
webdunia

ಶಾಂತಿ ಸುವ್ಯವಸ್ಥೆ ಕಾಪಾಡಿ -ಸಿಎಂ ಮನವಿ

ಶಾಂತಿ ಸುವ್ಯವಸ್ಥೆ ಕಾಪಾಡಿ -ಸಿಎಂ ಮನವಿ
ಬೆಂಗಳೂರು , ಮಂಗಳವಾರ, 15 ಮಾರ್ಚ್ 2022 (17:57 IST)
ಹಿಜಾಬ್ ‌ ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ . ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು . ಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ . ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪಾಲಿಸಿ . ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ , ಹೀಗಾಗಿ ತೀರ್ಪು ಪಾಲಿಸಿ . ಪರೀಕ್ಷೆಗಳಿಗೆ ಗೈರಾಗದಂತೆ ವಿದ್ಯಾರ್ಥಿಗಳಿಗೆ ಸಿಎಂ ಮನವಿ ಮಾಡಿದ್ದು , ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯ ಭದ್ರತೆ ಒದಗಿಸಲಾಗುವುದು . ರಾಜ್ಯದಲ್ಲಿ ಗೃಹ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ . ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ .

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿ ಆತ್ಮಹತ್ಯೆ ಅನುಮಾನ ಸುತ್ತ