Webdunia - Bharat's app for daily news and videos

Install App

‘ನನ್ನನ್ನೇ 5 ವರ್ಷ ಮುಖ್ಯಮಂತ್ರಿ ಮಾಡಿ’

Webdunia
ಬುಧವಾರ, 17 ಮೇ 2023 (17:03 IST)
ಚುನಾವಣೆಯ ಸಮಯದಲ್ಲಿ ಮತದಾರರಿಗೆ ʼಗ್ಯಾರಂಟಿ ಯೋಜನೆʼಯ ಭರವಸೆ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಈಗ ʼಗ್ಯಾರಂಟಿ ಸಿಎಂʼ ಹುದ್ದೆ ನೀಡುವಂತೆ ಹೈಕಮಾಂಡ್‌ ಮುಂದೆ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್‌ ಇಬ್ಬರನ್ನೂ ಸಮಾಧಾನ ಪಡಿಸಲು ತಂತ್ರಗಳನ್ನು ಹೆಣೆಯುತ್ತಿದ್ದರೂ ಇಬ್ಬರೂ ಮೊದಲ ಅವಧಿಗೆ ನನ್ನನ್ನೇ ಸಿಎಂ ಮಾಡಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ. ವಿವಿಧ ಭಾಗ್ಯಗಳನ್ನು ನೀಡಿದ್ದ ಕಾಂಗ್ರೆಸ್‌ ಈಗ ಯಾರಿಗೆ ʼಗ್ಯಾರಂಟಿ ಸಿಎಂʼ ಭಾಗ್ಯ ನೀಡುತ್ತದೆ ಎನ್ನುವುದೇ ಸದ್ಯದ ಕುತೂಹಲ. ಡಿಕೆಶಿಯ ಈ ಸೂತ್ರವನ್ನು ನಾನು ಒಪ್ಪುವುದಿಲ್ಲ. ಮಾಡುವುದಾದರೇ ನನ್ನನ್ನೇ ಮೊದಲು ಸಿಎಂ ಮಾಡಿ. ನಾನು ಕೂಡ ಒಪ್ಪಂದಕ್ಕೆ ಸಿದ್ದನಿದ್ದು, ಈ ವಿಚಾರವನ್ನು ನಾನು ಈ ಮೊದಲೇ ತಿಳಿಸಿದ್ದೇನೆ. ಇದು ಸಾಧ್ಯವಾಗದೇ ಇದ್ದರೆ ನನ್ನನ್ನೇ 5 ವರ್ಷವೂ ಸಿಎಂ ಆಗಿ ಮುಂದುವರಿಸಿ. ಎರಡು, ಮೂರು ವರ್ಷ ಎಂದು ಹೇಳಿ ಗೊಂದಲ ಸೃಷ್ಟಿಸಬೇಡಿ. ಗೊಂದಲ, ಅನಿಶ್ಚಿತತೆಯಲ್ಲಿ ಸಿಎಂ ಆಯ್ಕೆ ಮಾಡುವುದು ಸರಿಯಲ್ಲ. ಇದು ಆಡಳಿತದ ಮೇಲೂ ಪರಿಣಾಮ ಬೀರುತ್ತದೆ. ಇದು ನನ್ನ ಕೊನೆಯ ಚುನಾವಣೆಯಾಗಿರುವುದರಿಂದ ಸಿಎಂ ರೇಸ್‍ನಿಂದ ನನ್ನನ್ನು ಹಿಂದೆ ಸರಿಯಲು ಹೇಳಬೇಡಿ ಎಂದು ಸಿದ್ದರಾಮಯ್ಯ ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments