Webdunia - Bharat's app for daily news and videos

Install App

ಕಪ್ಪು ಹಣ ನಿಯಂತ್ರಣದ ಉದ್ದೇಶವಿದ್ದರೆ, ಮೊದಲು ನಿಮ್ಮ ಮನೆ ಕ್ಲೀನ್ ಮಾಡ್ಕೊಳ್ಳಿ: ಎಸ್.ಆರ್.ಹಿರೇಮಠ್

Webdunia
ಸೋಮವಾರ, 2 ಜನವರಿ 2017 (09:19 IST)
ಕಪ್ಪು ಹಣ ನಿಯಂತ್ರಣಕ್ಕೆ ತರುವ ಉದ್ದೇಶವಿದ್ದರೆ ಮೊದಲು ನಿಮ್ಮ ಮನೆ ಕ್ಲೀನ್ ಮಾಡಿ. ಇದರಿಂದ ಮಾತ್ರ ಸ್ವಚ್ಛ ಭಾರತ ಹಾಗೂ ನೋಟು ನಿಷೇಧ ನಿರ್ಧಾರಕ್ಕೆ ಬೆಲೆ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಕುರಿತು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಲೇವಡಿ ಮಾಡಿದ್ದಾರೆ. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾದವರು ಮೊದಲು ತಮ್ಮ ಪಕ್ಷದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪತ್ನಿ ವಿರುದ್ಧ ಕೇಳಿ ಬಂದಿರುವ 40 ಸಾವಿರ ಕೋಟಿ ಗಣಿ ವ್ಯವಹಾರ ಹಾಗೂ ಸಂಸದ ಶ್ರೀರಾಮುಲು ಅವರು ನೂರು ಕೋಟಿ ರೂಪಾಯಿ ಖರ್ಚು ಮಾಡಿ ಮನೆ ಕಟ್ಟಿಸಿದ್ದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಸವಾಲ್ ಎಸೆದರು. 
 
ಜನಾರ್ದನ ರೆಡ್ಡಿ ಹತ್ತಿರವಿರುವುದೆಲ್ಲ ಕಪ್ಪು ಹಣ ಎಂದು ಎಲ್ಲರಿಗೂ ಗೊತ್ತು. ಅದನ್ನು ನೀವು ಪ್ರಶ್ನಿಸುತ್ತಿಲ್ಲ. ಸ್ವಚ್ಛ ಭಾರತ ಅಭಿಯಾನ ಜಾರಿಗೊಳಿಸಿದ್ದೀರಿ. ಹಾಗೇ ನಿಮ್ಮ ಅಂತರಂಗವೂ ಶುದ್ಧ ಮಾಡಿಕೊಳ್ಳಿ ಎಂದರು.
 
ರಾಜ್ಯದ ಮುಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯದಲ್ಲಿ ಇರಲು ಸೂಕ್ತ ವ್ಯಕ್ತಿ ಅಲ್ಲ. ಮೊದಲು ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ಆಗ ಮಾತ್ರ ನೀವು ಮಾಡಿದ ಘೋಷಣೆಗಳಿಗೆ ಬೆಲೆ ಬರುತ್ತದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಕಿಡಿಕಾರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments