Webdunia - Bharat's app for daily news and videos

Install App

ದುರುದ್ದೇಶಪೂರಿತ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ಬಿತ್ತು ದಂಡ

Webdunia
ಶನಿವಾರ, 13 ಅಕ್ಟೋಬರ್ 2018 (14:04 IST)
ದುರುದ್ದೇಶಪೂರಿತ ಪ್ರಕರಣ ದಾಖಲಿಸಿ, ಮಾನಹಾನಿ ಮಾಡಿದ್ದ ಪೊಲೀಸ್ ಅಧಿಕಾರಿಗಳಿಗೆ 7,62,268 ರೂ.ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಲಯ 7,62,268 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2013ರ ನ. 25 ರಂದು ಶ್ರೀರಂಗಪಟ್ಟಣದ ಹೊಟೇಲ್ ವೊಂದರಲ್ಲಿ ಮಂಡ್ಯ ನಗರಸಭೆ ಸದಸ್ಯ ಅರುಣ್ ಕುಮಾರ್ ಎಂಬುವರು 25 ಲಕ್ಷ ರೂ. ಇಟ್ಟುಕೊಂಡು ವ್ಯಕ್ತಿವೊಬ್ಬರ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಆಗಿನ ಪ್ರೊಬೇಷನರಿ ಡಿವೈಎಸ್ಪಿ ಆಗಿದ್ದ ಗೀತಾ, ಸಿಪಿಐ ನಾಗೇಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಹಣ ವಶಕ್ಕೆ ಪಡೆದುಕೊಂಡು ಖೋಟಾ ನೋಟು ಖರೀದಿ ದಂಧೆ ಪ್ರಕರಣ ದಾಖಲಿಸಿದ್ದರು.

ಆದರೆ ಸೂಕ್ತ ಸಾಕ್ಷಿ ಒದಗಿಸಿ ಸಾಬೀತು ಮಾಡುವಲ್ಲಿ ವಿಫಲವಾಗಿದ್ರಿಂದ 2016ರಲ್ಲಿ ಪ್ರಕರಣ ಖುಲಾಸೆಯಾಗಿತ್ತು. ನಂತರ ಅರುಣ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿ, 1 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ವೀರಣ್ಣ ಸೋಮಶೇಖರ್, ಪ್ರಕರಣ ದಾಖಲಿಸಿದ್ದ ಗೀತಾ, ಅರುಣ್ ನಾಗೇಗೌಡ ಹಾಗೂ ಅಂದಿನ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ  7,62,268 ದಂಡ ವಿಧಿಸಿ, ಆ ಹಣದಲ್ಲಿ 5 ಲಕ್ಷ ರೂ.ಅನ್ನು ಸಂತ್ರಸ್ತ ಅರುಣ್ ಕುಮಾರ್ ಅವರಿಗೆ ನೀಡುವಂತೆ ತೀರ್ಪು ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments