Webdunia - Bharat's app for daily news and videos

Install App

ಇನ್ನೇನು ಎಲ್ಲವೂ ಮುಗಿತಲ್ಲ..... ಮತ್ಯಾಕೆ ಫೋನ್ ಮಾಡ್ತೀರಾ: ಸಿಎಂಗೆ ಗುತ್ತೇದಾರ್ ತಿರುಗೇಟು

Webdunia
ಶುಕ್ರವಾರ, 24 ಜೂನ್ 2016 (14:11 IST)
ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ದೊರೆಯದೆ ಅಸಮಾಧಾನಗೊಂಡಿದ್ದ ಶಾಸಕ ಮಾಲೀಕಯ್ಯಾ ಗುತ್ತೇದಾರ್‌ಗೆ ಸಿಎಂ ಕರೆ ಮಾಡಿದಾಗ, ಇನ್ನೇನು ಎಲ್ಲವೂ ಮುಗಿತಲ್ಲ..... ಮತ್ಯಾಕೆ ಫೋನ್ ಮಾಡ್ತೀರಾ ಎಂದು ಹೇಳಿ ಫೋನ್ ಕುಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಮೂರು ವರ್ಷಗಳಿಂದ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದಾಗಿ ಭರವಸೆಯೊಡ್ಡಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ಸಚಿವರನ್ನಾಗಿ ಸಂಪುಟಕ್ಕೆ ತೆಗೆದುಕೊಳ್ಳದಿರುವುದು ಗುತ್ತೇದಾರ್ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.
 
ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಗುತ್ತೇದಾರ್‌ಗೆ ದೂರವಾಣಿ ಕರೆ ಮಾಡಿದಾಗ ಫೋನ್ ಕರೆ ಕಟ್ ಮಾಡಿದ್ದಾರೆ ಎನ್ನಲಾಗಿದೆ. ನಂತರ ಹಲವು ಬಾರಿ ಫೋನ್ ಕರೆಗಳು ಬಂದಾಗ ಅಸಮಾಧಾನದಿಂದಲೇ ಮಾತನಾಡಿದ ಗುತ್ತೇದಾರ್, ಸಚಿವ ಸಂಪುಟ ಪುನಾರಚನೆಯಾಗಿದೆ. ಮತ್ತ್ಯಾಕೆ ನನಗೆ ಕರೆ ಮಾಡಿ ಹಿಂಸೆ ಕೊಡ್ತೀರಾ ಎಂದು ಕೇಳಿದ್ದಾರೆ ಎನ್ನಲಾಗಿದೆ.
 
ರಾಜಕೀಯದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗುವುದು ಸಾಮಾನ್ಯ ವಿಷಯ. ಆದರೆ, ನಿಮ್ಮ ಯೋಗ್ಯತೆಗೆ, ಅರ್ಹತೆಗೆ ತಕ್ಕಂತೆ ಹುದ್ದೆ ನಿಮ್ಮನ್ನು ಅರಸಿ ಬರುತ್ತದೆ. ಬೇಜಾರು ಮಾಡಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments