Publish Date: Mon, 06 Nov 2017 (14:06 IST)
Updated Date: Mon, 06 Nov 2017 (14:08 IST)
ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕಾ ಖರ್ಗೆ ವಿರುದ್ಧ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ್ ವಾಗ್ದಾಳಿ ನಡೆಸಿದ್ದಾರೆ.
ನನ್ನ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಸಚಿವ ಖರ್ಗೆ ವಿರುದ್ಧ ಗುತ್ತೇದಾರ್ ಏಕವಚನದಲ್ಲಿಯೇ ವಾಕ್ಪ್ರಹಾರ್ ನಡೆಸಿ ಇದರ ಬಗ್ಗೆ ನನಗೆ ನೋವಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಮಿನಿಸ್ಟರ್ ಆದವನಿಗೆ ಮಾತನಾಡುವ ಗತ್ತು ಇರಬೇಕು. ಯೋಗ್ಯತೆ ಇಲ್ಲದವನಿಗೆ ಮಿನಿಸ್ಟರ್ ಎಂದು ಕರೆಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ವಿರುದ್ಧ ಹಿರಿಯ ಶಾಸಕ, ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.