Publish Date: Sat, 31 Mar 2018 (09:08 IST)
Updated Date: Sat, 31 Mar 2018 (09:10 IST)
ಬೆಂಗಳೂರು: ಮೊನ್ನೆಯಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್, ಬಿಜೆಪಿ ಸೇರುವುದಾಗಿ ಹೇಳಿಕೆ ನೀಡಿದ್ದರೂ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ.
ನಿನ್ನೆ ಅಮಿತ್ ಶಾ ಸಮ್ಮುಖದಲ್ಲಿ ಮೈಸೂರಿನಲ್ಲಿ ಗುತ್ತೇದಾರ್ ಬಿಜೆಪಿ ಸೇರಬೇಕಾಗಿತ್ತು. ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜತೆಗೆ ಮಾತುಕತೆಯನ್ನೂ ನಡೆಸಿ, ಮಾಧ್ಯಮಗಳಿಗೂ ಬಿಜೆಪಿಗೆ ಷರತ್ತಿಲ್ಲದೇ ಸೇರುವುದಾಗಿ ಹೇಳಿಕೆ ನೀಡಿದ್ದರು.
ಆದರೆ ನಿನ್ನೆ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿಲ್ಲ. ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಬದಲಾಗಿತ್ತು. ಇಂದು ತಮ್ಮ ಸ್ವಕ್ಷೇತ್ರದಲ್ಲಿ ಬೆಂಬಲಿಗರೊಂದಿಗೆ ಮಧ್ಯಾಹ್ನ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ್ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಉಳಿದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ