Daily Horoscope

ಹಿಂದಿಯಲ್ಲಿ ಮಾತನಾಡಿ ಎಂದಿದ್ದಕ್ಕೆ ಪತ್ರಕರ್ತನಿಗೆ ಕ್ಲಾಸ್ ತೆಗೆದುಕೊಂಡ ಮಲ್ಲಿಕಾರ್ಜುನ ಖರ್ಗೆ

Krishnaveni K
ಶನಿವಾರ, 17 ಆಗಸ್ಟ್ 2024 (14:56 IST)
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿ ಹಿಂದಿಯಲ್ಲಿ ಮಾತನಾಡಲು ಹೇಳಿದಾಗ ಪತ್ರಕರ್ತನಿಗೇ ಕ್ಲಾಸ್ ತೆಗೆದುಕೊಂಡ ಘಟನೆ ಇಂದು ನಡೆದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಮಲ್ಲಿಕಾರ್ಜುನ ಖರ್ಗೆಯವರನ್ನು ಮಾತನಾಡಿಸಿದರು. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪತ್ರಕರ್ತರೊಬ್ಬರು ಹಿಂದಿಯಲ್ಲಿ ಪ್ರಶ್ನೆ ಕೇಳಿದರು.

ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಕನ್ನಡದಲ್ಲೇ ಪ್ರತಿಕ್ರಿಯಿಸಲು ಹೊರಟಿದ್ದಾರೆ. ಆಗ ಆ ಪತ್ರಕರ್ತ ‘ಸರ್ ಹಿಂದಿಯಲ್ಲಿ ಹೇಳಿ’ ಎಂದಿದ್ದಾರೆ. ಇದರಿಂದ ಖರ್ಗೆ ಕೊಂಚ ಸಿಟ್ಟಾದರು. ‘ಅರೇ.. ನೀವು ಕನ್ನಡ ಕಲಿಯಿರಿ. ಏಳು ಭಾಷೆಯ ಪತ್ರಕರ್ತರಿದ್ದೀರಿ. ಎಲ್ಲಾ ಭಾಷೆಯಲ್ಲಿ ಮಾತನಾಡಲು ಆಗುತ್ತಾ? ಕನಿಷ್ಠ ಪಕ್ಷ ಕರ್ನಾಟಕಕ್ಕೆ ಬಂದಾಗಲಾದರೂ ಕನ್ನಡ ಕಲಿಯಿರಿ’ ಎಂದರು.

ಇನ್ನೂ ಮುಂದುವರಿದು, ‘ನೀವು ತಮಿಳುನಾಡಿಗೆ ಹೋಗಿ ಹೀಗೆ ಹಿಂದಿಯಲ್ಲಿ ಮಾತನಾಡಿ ಎಂದರೆ ಅವರು ಕೇಳುತ್ತಾರಾ’ ಎಂದು ಕೇಳಿದರು. ಆಗ ಆ ಪತ್ರಕರ್ತ ‘ಅಲ್ಲೂ ಕೇಳುತ್ತೇವೆ’ ಎಂದಿದ್ದಾರೆ. ಅದಕ್ಕೆ ಖರ್ಗೆ, ಅರೇ.. ಅದು ಹೇಗೆ ಸಾಧ್ಯ? ಎಂದು ಬಳಿಕ ಆಂಗ್ಲ ಭಾಷೆಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments