Select Your Language

Notifications

webdunia
webdunia
webdunia
webdunia

ಮಹದಾಯಿ ವಿಚಾರದಲ್ಲಿ ಮಲ್ಲಿಕಾರ್ಜುನ್ ಖರ್ಗೆ ರಾಜಕೀಯ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಷಿ

ಮಹದಾಯಿ ವಿಚಾರದಲ್ಲಿ ಮಲ್ಲಿಕಾರ್ಜುನ್ ಖರ್ಗೆ ರಾಜಕೀಯ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಷಿ
ಹುಬ್ಬಳ್ಳಿ , ಶನಿವಾರ, 15 ಅಕ್ಟೋಬರ್ 2016 (16:20 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಷಿ ಆರೋಪಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ. ಈಗಾಗಲೇ ನಾವು ವಿವಾದ ಇತ್ಯರ್ಥಕ್ಕಾಗಿ ಮಹಾರಾಷ್ಟ್ರ ಹಾಗೂ ಗೋವಾ ನಾಯಕರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.
 
ಮಹದಾಯಿ ವಿವಾದ ಕುರಿತು ಚರ್ಚೆ ನಡೆಸಲು ಅಕ್ಟೋಬರ್ 21 ರಂದು ಮುಂಬೈನಲ್ಲಿ ಕರೆದಿರುವ ಸಭೆಗೆ ಗೋವಾ ಹಾಗೂ ಮಹರಾಷ್ಟ್ರ ವಿರೋಧ ಪಕ್ಷದ ನಾಯಕರು ಆಗಮಿಸಲಿ. ವಿವಾದ ಬಗೆಹರಿಸಲು ಕಾಂಗ್ರೆಸ್‌ನಿಂದಲೇ ಅಪಸ್ವರ ಕೇಳಿ ಬರುತ್ತಿದೆ ಎಂದು ದೂರಿದರು. 
 
ಕಳಸಾ ಬಂಡೂರು ಹಾಗೂ ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮೊದಲು ತಮ್ಮವರ ಮನವೊಲಿಸಲಿ ಎಂದು ಸಂಸದ ಪ್ರಹ್ಲಾದ್ ಜೋಷಿ ಆಗ್ರಹಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಸಾಗಿಸುತ್ತಿದ್ದ ಆರೋಪ; ಮಾಜಿ ಮುಖ್ಯಮಂತ್ರಿ ಮಾಂಜಿ ಮೊಮ್ಮಗನ ಬಂಧನ