ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

Krishnaveni K
ಸೋಮವಾರ, 28 ಜುಲೈ 2025 (11:20 IST)

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದರೂ ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ಹೊರಹಾಕಿದ್ದಾರೆ.

1999 ರಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಹಗಲಿರುಳು ದುಡಿದರೂ ಕೊನೆಗೆ ಸಿಎಂ ಆಗುವ ಅವಕಾಶ ಸಿಗಲಿಲ್ಲ. ಕೇವಲ 4 ತಿಂಗಳ ಹಿಂದೆ ಪಕ್ಷಕ್ಕೆ ಬಂದ ಎಸ್ಎಂ ಕೃಷ್ಣಗೆ ಸಿಎಂ ಸ್ಥಾನ ಸಿಕ್ಕಿತು. ನಾನು ಪಕ್ಷವನ್ನು ಅಧಿಕಾರಕ್ಕೆ ತರಲು ಪಟ್ಟಿದ್ದ ಶ್ರಮವೆಲ್ಲಾ ನೀರಿನಲ್ಲಿ ಹೋಮ ಮಾಡಿದಂತಾಯಿತು ಎಂದು 26 ವರ್ಷಗಳ ಹಿಂದೆ ನಡೆದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ವಿಜಯಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮನದಾಳದ ಮಾತು ಹಂಚಿಕೊಂಡಿದ್ದಾರೆ. ಪಕ್ಷವನ್ನು ಗೆಲ್ಲಿಸಿದ್ದೆ. ಆದರೆ ನನಗೇನೂ ಸಿಗಲಿಲ್ಲ ಎಂದಿದ್ದಾರೆ. ಆಗ ಎಸ್ಎಂ ಕೃಷ್ಣ ಸಿಎಂ ಆದರೆ ಮಲ್ಲಿಕಾರ್ಜುನ ಖರ್ಗೆ ಗೃಹಸಚಿವರಾಗಿದ್ದರು. ಈ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯ ಜೀವನದ ಜೊತೆಗೆ ವೈಯಕ್ತಿಕ ಜೀವನದ ಬಗ್ಗೆಯೂ ಖರ್ಗೆ ಮನದಾಳ ಬಿಚ್ಚಿಟ್ಟಿದ್ದಾರೆ. ರಜಾಕರು ನಮ್ಮ ಮನೆ ಸುಟ್ಟು ಹಾಕಿದ್ದರು. ಆಗ ಅವರ ದಾಳಿಯಿಂದ ಕಾಪಾಡಿಕೊಳ್ಳಲು ತಂದೆ ಜೊತೆ ಮಹಾರಾಷ್ಟ್ರಕ್ಕೆ ಹೋಗಿದ್ದೆ. 800 ಜನರು ಸಜೀವ ದಹವಾಗಿದ್ದರು. ನನ್ನನ್ನು ಬದುಕಿಸಲು ಪೂನಾಗೆ ಕರೆದುಕೊಂಡು ಹೋದ್ದರು. ಪೂನಾದಲ್ಲಿ ಚಿಕ್ಕಪ್ಪ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಪೂನಾಗೆ ಹೋಗಿದ್ದಾಗ ಅವರು ಅಲ್ಲಿರಲಿಲ್ಲ. ಬಳಿಕ ಕಲಬುರಗಿಗೆ ಬಂದೆವು ಎಂದು ಅವರು ನೆನಪಿಸಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಮುಂದಿನ ಸುದ್ದಿ
Show comments