ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Krishnaveni K
ಸೋಮವಾರ, 24 ನವೆಂಬರ್ 2025 (08:45 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಕುರ್ಚಿ ಕದನದ ಅಂತಿಮ ತೀರ್ಮಾನವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ ಟ್ರೋಲ್ ಗೊಳಗಾಗಿದ್ದಾರೆ. ಹಾಗಿದ್ದರೆ ನೀವು ಯಾರು ಎಂದು ಪಬ್ಲಿಕ್ ಪ್ರಶ್ನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ. ಅಂದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖ್ಯಸ್ಥ. ಕರ್ನಾಟಕ ಕಾಂಗ್ರೆಸ್ ಕುರ್ಚಿ ಕದನ ಶಮನ ಮಾಡಲು ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಬಂದು ತಮ್ಮ ನಿವಾಸದಲ್ಲಿ ಎರಡು ದಿನಗಳಿಂದ ಬೀಡುಬಿಟ್ಟಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಹಾಗೂ ಹಲವು ಪ್ರಮುಖ ನಾಯಕರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ನೀ ಕೊಡೆ ನಾಬಿಡೆ ಕದನ ಮಾತ್ರ ನಿಲ್ಲುತ್ತಿಲ್ಲ. ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆ ಅಸಹಾಯಕತೆ ಪ್ರದರ್ಶಿಸಿದ್ದಾರೆ. ನಾನೇನೂ ಹೇಳುವ ಸ್ಥಿತಿಯಲ್ಲಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ ಎಂದು ನಿನ್ನೆ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಗೊಳಗಾಗಿದೆ. ಖರ್ಗೆ ಜೀ ತಾವೇ ಪಕ್ಷದ ಮುಖ್ಯಸ್ಥ ಎನ್ನುವುದನ್ನು ಮರೆತಿದ್ದಾರೆ ಎಂದು ಕೆಲವರು ಹೇಳಿದರೆ ಮತ್ತೆ ಕೆಲವರು ಹಾಗಿದ್ದರೆ ನೀವು ಯಾರು? ನೀವು ಹೈಕಮಾಂಡ್ ಅಲ್ವಾ? ನೀವು ಕೇವಲ ಹೆಸರಿಗೆ ಮಾತ್ರ ಎಐಸಿಸಿ ಅಧ್ಯಕ್ಷ ಅನ್ನಿ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ಮುಂದಿನ ಸುದ್ದಿ
Show comments