Webdunia - Bharat's app for daily news and videos

Install App

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೊಸ ಬೇಡಿಕೆ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (10:43 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚಟವಟಿಕೆಗಳು ಬಿರುಸಿನಿಂದ ಸಾಗಿದ್ದು, ನಾಯಕರು ತಮಗೆ ಸಚಿವ ಸ್ಥಾನ ಕೊಡುವಂತೆ ಒತ್ತಡ ಹೇರುವುದು ಸಾಮಾನ್ಯವಾಗಿದೆ.

ಇದೀಗ ಲೋಕಸಭೆ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಪರ ಲಾಬಿ ನಡೆಸಿದ್ದಾರೆ. ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಖರ್ಗೆ ಒತ್ತಾಯಿಸಿದ್ದಾರೆ.

ರಾಮಲಿಂಗಾರೆಡ್ಡಿಗೆ ಬೆಂಗಳೂರಿನ ಮೂರು ನಾಲ್ಕು ಕ್ಷೇತ್ರಗಳ ಮೇಲೆ ಹೆಚ್ಚು ಹಿಡಿತವಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಕಾರ್ಯಕರ್ತರ ಜತೆಗೂ ಅವರಿಗೆ ಒಡನಾಟ ಚೆನ್ನಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾ ರೆಡ್ಡಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಇಷ್ಟು ದಿನ ಸಚಿವ ಸ್ಥಾನ ಸಿಗದ ಬೇಸರದಲ್ಲಿ ಪಕ್ಷದ ಚಟುವಟಿಕೆಗಳಿಂದ ರಾಮಲಿಂಗಾ ರೆಡ್ಡಿ ದೂರವೇ ಉಳಿದಿದ್ದರು. ಈ ಬಾರಿ ಹಿರಿಯರಿಗೆ ನೀಡುವ ಕೋಟಾದಲ್ಲಿ ರಾಮಲಿಂಗಾರೆಡ್ಡಿ ಹೆಸರು ಸೇರ್ಪಡೆಯಾಗಲಿದೆಯೇ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments