Select Your Language

Notifications

webdunia
webdunia
webdunia
Sunday, 13 April 2025
webdunia

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ , ಬುಧವಾರ, 10 ಜೂನ್ 2020 (18:34 IST)
ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.

ದೂರವಾಣಿ ಕರೆ ಮೂಲಕ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ಜೀವಬೆದರಿಕೆ ಹಾಕಲಾಗಿದ್ದು, ಇದು ಹೇಡಿತನದ ಕೆಲಸ.
ಕರೆ ಮಾಡಿರುವ ದುಷ್ಕರ್ಮಿಗಳನ್ನು ಬಂಧನ ಮಾಡಬೇಕೆಂದು ಮಾಜಿ ಸಚಿವ ಬಾಬುರಾವ್ ಚವ್ಹಾಣ ಹೇಳಿದ್ದಾರೆ.

ಕೇಂದ್ರ ಸರಕಾರವನ್ನು ಎದುರಿಸುವ ದಿಟ್ಟತನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ. ಅವರು ರಾಜ್ಯಸಭೆಗೆ ಬಾರದಂತೆ ಮಾಡಲು ಅನೈತಿಕ ದಾರಿ ತುಳಿಯುವುದರಿಂದ ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ರೀತಿ ಬೆದರಿಕೆ ಮುಂದುವರಿದರೆ ದೇಶಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಈ ಜಿಲ್ಲೆಯಲ್ಲಿ 800 ರ ಗಡಿಯತ್ತ ಕೊರೊನಾ ಪಾಸಿಟಿವ್