ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ಅರೆಸ್ಚ್

Webdunia
ಗುರುವಾರ, 12 ಅಕ್ಟೋಬರ್ 2017 (13:47 IST)
13 ವರ್ಷ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರವೆಸಗಿದ 24 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆನೇಕಲ್‌ನ ಚಂದಾಪುರದಲ್ಲಿರುವ ಬೇಕರಿಯಲ್ಲಿ ಉದ್ಯೋಗಿಯಾಗಿರುವ ಶಂಕಿತ ಆರೋಪಿ ರಂಜಿತ್ ಕೇರಳ ಮೂಲದವನಾಗಿದ್ದು, ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಪೊಲೀಸ್ ಮೂಲಗಳ ಪ್ರಕಾರ, ರಂಜಿತ್  ಪಶ್ಚಿಮ ಬಂಗಾಳದ ವಿಚ್ಚೇದಿತ ಮಹಿಳೆಯ ಸ್ನೇಹಿತನಾಗಿದ್ದ. ಮಹಿಳೆಗೆ 13 ಮತ್ತು 14 ವರ್ಷ ವಯಸ್ಸಿನ ಇಬ್ಬರು ಪುತ್ರಿಯರಿದ್ದಾರೆ. ಕೆಲ ವರ್ಷಗಳ ಸಂಬಂಧದ ನಂತರ ಕಳೆದ ವರ್ಷ ವಿವಾಹವಾಗಿದ್ದರು ಎನ್ನಲಾಗಿದೆ.
 
ಚಂದಾಪುರದಲ್ಲಿ ಬಾಡಿಗೆ ಕೋಣೆಯೊಂದನ್ನು ಪಡೆದಿದ್ದ ರಂಜಿತ್, ಬೇಕರಿಯಲ್ಲಿ ಕೆಲಸ ಮುಗಿದ ನಂತರ ಮುರುಗೇಶ್‌ಪಾಳ್ಯದಲ್ಲಿರುವ ಪತ್ನಿ ಮತ್ತು ಪೋಷಕರನ್ನು ಭೇಟಿಯಾಗಲು ತೆರಳುತ್ತಿದ್ದ ಎಂದು ಮೂಲಗಳು ತಿಳಿಸಿವೆ.
 
ರಂಜಿತ್ ಹಿರಿಯ ಪುತ್ರಿಯ ಮೇಲೆ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ. ಸಿನೆಮಾ ತೋರಿಸುವುದಾಗಿ ಚಂದಾಪುರದಲ್ಲಿರುವ ಬಾಡಿಗೆ ಕೋಣೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
 
ಹಿರಿಯ ಪುತ್ರಿಯ ನಡತೆಯಿಂದ ಸಂಶಯಗೊಂಡ ಮಹಿಳೆ, ಪುತ್ರಿಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಹಿರಂಗವಾಗಿದೆ. ಕೂಡಲೇ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಪತಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments