Webdunia - Bharat's app for daily news and videos

Install App

ನ್ಯಾಯಾಲಯದಲ್ಲೇ ಅಳಿಯನ ಮೇಲೆ ಮಚ್ಚು ಬೀಸಿದ ಮಾವ

Webdunia
ಶನಿವಾರ, 25 ಜೂನ್ 2016 (08:54 IST)
ಮಾವನೊಬ್ಬ ತನ್ನ ಅಳಿಯನ ಮೇಲೆ ನ್ಯಾಯಾಲಯದಲ್ಲೇ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
 
ಬೆಂಗಳೂರು ಮೂಲದ ಅಮೇರಿಕಾ ನಿವಾಸಿ ಎಂಜಿನಿಯರ್ ಶಶಿಕಿರಣ್ ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಗೊಂಡಿರುವ ಅವರನ್ನು ಸದ್ಯ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಾವ ರಮೇಶ್ ಮತ್ತು ಆತನ ಸಹಚರರು ನಾಪತ್ತೆಯಾಗಿದ್ದಾರೆ. 
 
ಸೂಳೆಬೈಲಿನ ನಿವಾಸಿ ರಮೇಶ್ ಪುತ್ರಿ ಸೌಮ್ಯ ಅವರನ್ನು ಶಶಿಕಿರಣ್‍ಗೆ ಮದುವೆ ಮಾಡಿಕೊಡಲಾಗಿತ್ತು. ವಿವಾಹದ ಬಳಿಕ ದಂಪತಿ ಅಮೆರಿಕದಲ್ಲಿ ನೆಲೆಸಿದ್ದರು. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದಿದ್ದುದರಿಂದ ಸೌಮ್ಯ ತವರಿಗೆ ಮರಳಿದ್ದಳು. 
 
ಬಳಿಕ ಶಶಿಕಿರಣ್ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಶಶಿಕಿರಣ್ ಮತ್ತು ಸೌಮ್ಯ ಕಡೆಯವರು ವಿಚಾರಣೆಗೆಂದು ಶಿವಮೊಗ್ಗ ಸಿವಿಲ್ ನ್ಯಾಯಾಲಯಕ್ಕೆ ಬಂದಿದ್ದರು. 
 
ವಿಚಾರಣೆ ಬಳಿಕ ಹಿಂತಿರುಗುವಾಗ ಕೋರ್ಟ್ ಆವರಣದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದು ಸೌಮ್ಯಳ ತಂದೆ  ರಮೇಶ್ ಅಳಿಯ ಶಶಿಕಿರಣ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 
 
ರಮೇಶ್ ವಿರುದ್ಧ ಜಯನಗರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದು ಆತನಿಗಾಗಿ ಪೋಲೀಸರು ಶೋಧ ನಡೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments