Webdunia - Bharat's app for daily news and videos

Install App

ಜೈ ಶ್ರೀರಾಮ್ ಎಂದ ಯುವಕನಿಗೆ ಅನ್ಯಕೋಮಿನ 20 ಯುವಕರ ಗುಂಪಿನಿಂದ ದಾಳಿ

Krishnaveni K
ಬುಧವಾರ, 24 ಏಪ್ರಿಲ್ 2024 (10:00 IST)
ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ 20 ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮತೀಯ ಗಲಭೆಗಳು ಹೆಚ್ಚಾಗುತ್ತಿರುವುದು ಗಮನಿಸಬೇಕಾದ ಅಂಶ. ಇತ್ತೀಚೆಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಬೆಂಗಳೂರಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಅನ್ಯಕೋಮಿನ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಇದಾದ ಬಳಿಕ ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಫಯಾಜ್ ಎಂಬಾತ ನೇಹಾಳನ್ನು ಹತ್ಯೆ ಮಾಡಿದ್ದ. ಇದರ ಬೆನ್ನಲ್ಲೇ ಮತ್ತೊಬ್ಬ ಅನ್ಯಕೋಮಿನ ಯುವಕ ಹಿಂದೂ ಯುವತಿಯ ಮೇಲೆ ಪ್ರೀತಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಸುದ್ದಿಯಾಗಿತ್ತು.

ಇದೀಗ ಗಂಗಾವತಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ. ಬಾರ್ ನಲ್ಲಿ ಮದ್ಯಸೇವಿಸುವಾಗ ಯುವಕ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದು, ಕೆಲವು ಕ್ಷಣದ ನಂತರ ಬಾರ್ ನಿಂದ ಹೊರಬಂದಾಗ ಅನ್ಯಕೋಮಿನ 20 ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಕುಮಾರ್ ರಾಥೋಡ್ ಎಂಬಾತ ಹಲ್ಲೆಗೀಡಾದ ಯುವಕ. ಸ್ಥಳೀಯರು ಆತನನ್ನು ರಕ್ಷಿಸಿ ಮನೆಗೆ ಕಳುಹಿಸಿದರು. ಆದರೆ ಹೊಟ್ಟೆನೋವಿನಿಂದಾಗಿ ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments