Webdunia - Bharat's app for daily news and videos

Install App

ನಮ್ಮ ಮೆಟ್ರೋದಲ್ಲಿ ಜನದಟ್ಟಣೆ: ನೂಕು ನುಗ್ಗಲಿಗೆ ಬಿದ್ದು ಸೊಂಟ ಮುರಿದುಕೊಂಡ ವ್ಯಕ್ತಿ

Webdunia
ಗುರುವಾರ, 27 ಜುಲೈ 2017 (12:24 IST)
ಬೆಂಗಳೂರು:ನಮ್ಮ ಮೆಟ್ರೋದಲ್ಲಿ ಜನ ಸಂಚಾರ ಹೇರಳವಾಗಿದ್ದು, ಅದು ಪೀಕ್ ಅವರ್ ನಲ್ಲಂತೂ ಕೇಳುವುದೇ ಬೇಡ ಹೆಜ್ಜೆ ಇಡಲೂ ಸಾಧ್ಯವಿಲ್ಲದಷ್ಟು ಜನದಟ್ಟಣೆ, ನೂಕು ನುಗ್ಗಲು.  ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ ಜಿ ರಸ್ತೆಗೆ ಪ್ರತಿನಿತ್ಯ ಸಂಚರಿಸುವ 59 ವರ್ಷದ ಬಾಲಕೃಷ್ಣ ರೈ ಮೆಟ್ರೋ ಹತ್ತಲು ಹೋಗಿ ನೂಕು ನುಗ್ಗಲಿನಿಂದ ಬಿದ್ದ ಪರಿಣಾಮ ಸೊಂಟದ ಮೂಳೆಯನ್ನೇ ಮುರಿದುಕೊಂಡಿರುವ ಘಟನೆ ನಡೆದಿದೆ.
 
ಕೆಂಪೇಗೌಡ ನಿಲ್ದಾಣದ ಪ್ಲಾಟ್ ಫಾರಂ 3 ರಲ್ಲಿ ಓರ್ವ ಯುವಕ ಜನದಟ್ಟಣೆ ಮಧ್ಯೆ ರೈ ಅವರನ್ನು ತಳ್ಳಿದ್ದು,  ಯುವಕ ನೂಕಿದ ರಭಸಕ್ಕೆ ರೈಯವರ ಸೊಂಟದ ಕೆಳಗೆ ಮೂಳೆ ಮುರಿದು ಪ್ಲಾಟ್ ಫಾರಂನಲ್ಲಿ ಬಿದ್ದಿದ್ದಾರೆ.
 
ರಕ್ಷಣಾ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಆಗಿರುವ ಬಾಲಕೃಷ್ಣ ರೈ ಇದೀಗ ನಗರದ ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹಿಪ್ ಬದಲಾವಣೆ ಸರ್ಜರಿ ನಡೆಯಲಿದೆ. ಹೃದ್ರೋಗಿಯಾಗಿರುವ ಬಾಲಕೃಷ್ಣ ರೈಯವರಿಗೆ ಸಕ್ಕರೆ ಕಾಯಿಲೆ ಕೂಡ ಇದೆ. ಹಾಗಾಗಿ ಗುಣಮುಖವಾಗಲು ಕನಿಷ್ಠ 3 ತಿಂಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಿನಲ್ಲಿ ಪೀಕ್ ಅವರ್ ನಲ್ಲಿ ಮಟ್ರೊ ನಿಲ್ದಾಣದಲ್ಲಿ ಇರುವ ವಿಪರೀತ ಜನದಟ್ಟಣೆಯಲ್ಲಿ ಪ್ರಯಾಣಿಕರು ತಮ್ಮ ಸುರಕ್ಷತೆ ಕಾಪಾಡುವುದು ಅಗತ್ಯವಾಗಿದೆ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments