Webdunia - Bharat's app for daily news and videos

Install App

ನಮ್ಮ ಮೆಟ್ರೋದಲ್ಲಿ ಜನದಟ್ಟಣೆ: ನೂಕು ನುಗ್ಗಲಿಗೆ ಬಿದ್ದು ಸೊಂಟ ಮುರಿದುಕೊಂಡ ವ್ಯಕ್ತಿ

Webdunia
ಗುರುವಾರ, 27 ಜುಲೈ 2017 (12:24 IST)
ಬೆಂಗಳೂರು:ನಮ್ಮ ಮೆಟ್ರೋದಲ್ಲಿ ಜನ ಸಂಚಾರ ಹೇರಳವಾಗಿದ್ದು, ಅದು ಪೀಕ್ ಅವರ್ ನಲ್ಲಂತೂ ಕೇಳುವುದೇ ಬೇಡ ಹೆಜ್ಜೆ ಇಡಲೂ ಸಾಧ್ಯವಿಲ್ಲದಷ್ಟು ಜನದಟ್ಟಣೆ, ನೂಕು ನುಗ್ಗಲು.  ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ ಜಿ ರಸ್ತೆಗೆ ಪ್ರತಿನಿತ್ಯ ಸಂಚರಿಸುವ 59 ವರ್ಷದ ಬಾಲಕೃಷ್ಣ ರೈ ಮೆಟ್ರೋ ಹತ್ತಲು ಹೋಗಿ ನೂಕು ನುಗ್ಗಲಿನಿಂದ ಬಿದ್ದ ಪರಿಣಾಮ ಸೊಂಟದ ಮೂಳೆಯನ್ನೇ ಮುರಿದುಕೊಂಡಿರುವ ಘಟನೆ ನಡೆದಿದೆ.
 
ಕೆಂಪೇಗೌಡ ನಿಲ್ದಾಣದ ಪ್ಲಾಟ್ ಫಾರಂ 3 ರಲ್ಲಿ ಓರ್ವ ಯುವಕ ಜನದಟ್ಟಣೆ ಮಧ್ಯೆ ರೈ ಅವರನ್ನು ತಳ್ಳಿದ್ದು,  ಯುವಕ ನೂಕಿದ ರಭಸಕ್ಕೆ ರೈಯವರ ಸೊಂಟದ ಕೆಳಗೆ ಮೂಳೆ ಮುರಿದು ಪ್ಲಾಟ್ ಫಾರಂನಲ್ಲಿ ಬಿದ್ದಿದ್ದಾರೆ.
 
ರಕ್ಷಣಾ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಆಗಿರುವ ಬಾಲಕೃಷ್ಣ ರೈ ಇದೀಗ ನಗರದ ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹಿಪ್ ಬದಲಾವಣೆ ಸರ್ಜರಿ ನಡೆಯಲಿದೆ. ಹೃದ್ರೋಗಿಯಾಗಿರುವ ಬಾಲಕೃಷ್ಣ ರೈಯವರಿಗೆ ಸಕ್ಕರೆ ಕಾಯಿಲೆ ಕೂಡ ಇದೆ. ಹಾಗಾಗಿ ಗುಣಮುಖವಾಗಲು ಕನಿಷ್ಠ 3 ತಿಂಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಿನಲ್ಲಿ ಪೀಕ್ ಅವರ್ ನಲ್ಲಿ ಮಟ್ರೊ ನಿಲ್ದಾಣದಲ್ಲಿ ಇರುವ ವಿಪರೀತ ಜನದಟ್ಟಣೆಯಲ್ಲಿ ಪ್ರಯಾಣಿಕರು ತಮ್ಮ ಸುರಕ್ಷತೆ ಕಾಪಾಡುವುದು ಅಗತ್ಯವಾಗಿದೆ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments