Webdunia - Bharat's app for daily news and videos

Install App

ದುಬಾರಿ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಬೆಂಗಳೂರಿನ ವ್ಯಕ್ತಿ!

Webdunia
ಶನಿವಾರ, 28 ಮೇ 2022 (14:43 IST)
ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಬಳಿ ನಡೆದಿದೆ.
ಶ್ರೀರಂಗಪಟ್ಟಣದ ಗಂಜಾಂನ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿಯಲ್ಲಿ ಕಾರು ಮುಳುಗಿರುವುದನ್ನು ಕಂಡು ಆಶ್ಚರ್ಯಗೊಂಡ ಸ್ಥಳೀಯರು ಶ್ರೀರಂಗಪಟ್ಟಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನದಿಯಲ್ಲಿ ಇದ್ದ ಕಾರನ್ನು ಹೊರಕ್ಕೆ ತೆಗೆದಿದ್ದಾರೆ.
ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಗೆ ಕಾರನ್ನು ತೆಗೆದುಕೊಂಡು ಹೋದ ಪೊಲೀಸರು ಕಾರಿನ ಬಾಗಿಲು ತೆಗೆದು ಹುಡುಕಿದಾದ ದಾಖಲೆ ಪತ್ರಗಳು ಸಿಕ್ಕಿದ್ದು, ಇದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನ ರೂಪೇಶ್ ಅವರಿಗೆ ಸೇರಿದ ಕಾರು ಎಂದು ತಿಳಿದುಬಂದಿದೆ.
ಪೊಲೀಸರು ವಿಚಾರಣೆ ನಡೆಸಿದ ವೇಳೆ, ಕಾರು ಮಾಲೀಕ ರೂಪೇಶ್‌  ಕಾರನ್ನು ನೀರಿನಲ್ಲಿ ಮುಳುಗಿಸಿದ್ದರ ಬಗ್ಗೆ ಒಪ್ಪಿಕೊಂಡಿದ್ದಾನೆ. ರೂಪೇಶ್ ತಾಯಿ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು, ಅಂದಿನಿಂದ ಇಂದಿನವರೆಗೆ ಆತನ ವರ್ತನೆ ಸರಿ ಇಲ್ಲ, ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ ಎಂದು ರೂಪೇಶ್ ಸಂಬಂಧಿಕರು, ಸ್ನೇಹಿತರು ಹೇಳಿದ್ದಾರೆ. ಅಲ್ಲದೇ ಆತ ಪೊಲೀಸ್ ಠಾಣೆಗೆ ಬಂದಾಗಿನಿಂದಲೂ ಸರಿಯಾಗಿ ವರ್ತನೆ ಮಾಡುತ್ತಿರಲಿಲ್ಲ. ಆತನಿಗೆ ಮಾನಸಿಕ ಖಿನ್ನತೆ ಇರುವ ಕಾರಣ ಹೀಗೆ ಮಾಡಿರಬಹುದು ಎಂದು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments