ಪಾರಿವಾಳ ಹಿಡಿಯಲು ಹೋಗಿ ಮಹಡಿಯಿಂದ ಬಿದ್ದು ಯುವಕ ಸಾವು

Webdunia
ಮಂಗಳವಾರ, 10 ಆಗಸ್ಟ್ 2021 (21:28 IST)
ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಕಟ್ಟಡದಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಭೂಪಸಂದ್ರದ ನಿವಾಸಿ ಉಮರ್ ಫಾರೂಕ್ (19) ಮೃ
ತಪಟ್ಟ ಯುವಕ.
 
ಮೃತ ಉಮರ್ ಫಾರೂಕ್, ಸೋಮವಾರ ಸಂಜೆ ಪಾರಿವಾಳ ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.
 
ಪಾರಿವಾಳ ಹಿಡಿಯುವುದನ್ನು ಹವ್ಯಾಸ ಮಾಡಿಕೊಂಡಿದ್ದ ಮೃತ ಉಮರ್, ಹಲವು ಕಟ್ಟಡಗಳನ್ನು ಏರಿ ಪಾರಿವಾಳ ಹಿಡಿದು ತರುತ್ತಿದ್ದರು. ಇಂದು ಸಂಜೆಯೂ ನಾಲ್ಕು ಅಂತಸ್ತಿನ ಕಟ್ಟಡ ಏರಿ‌ ಮಹಡಿಯಲ್ಲಿ ನಿಂತು ಪಾರಿವಾಳ ಹಿಡಿಯುತ್ತಿದ್ದರು. ಅದೇ ಸಂದರ್ಭದಲ್ಲೇ ಆಯತಪ್ಪಿ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
 
ಈ ಸಂಬಂಧ ಸಂಜಯನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಕಾರ್ಕಳ ಥೀಮ್ ಪಾರ್ಕ್‌ನಲ್ಲಿ ಮತ್ತೊಂದು ಹೊಸ ಪ್ರಕರಣ ದಾಖಲು, ಯಾವಾ ವಿಚಾರಕ್ಕೆ ಗೊತ್ತಾ

Nipah Virus: ಪ.ಬಂಗಾಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಮುಂದಿನ ಸುದ್ದಿ
Show comments