ಪತ್ನಿ ಮೇಲೆ ಕಣ್ಣು ಹಾಕಬೇಡ ಅಂದಿದ್ದಕ್ಕೆ ಸೋದರರಿಂದ ಬರ್ಬರ ಹತ್ಯೆ

Webdunia
ಗುರುವಾರ, 19 ಆಗಸ್ಟ್ 2021 (14:48 IST)
ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದೂ ಅಲ್ಲದೇ ಎಚ್ಚರಿಕೆ ನೀಡಿದ್ದಕ್ಕಾಗಿ ಆತನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಭೀಕರ ಘಟನೆ
ಬೆಂಗಳೂರಿನಲ್ಲಿ ನಡೆದಿದೆ.
ಜೆಜೆ ನಗರದ ರೈಲ್ವೆ ಟ್ರ್ಯಾಕ್ ಬಳಿ ಹತ್ಯೆ ಮಾಡಲಾಗಿದ್ದು, ಪಾದರಾಯನಪುರ ನಿವಾಸಿ ಸಾದಿಲ್ ಪಾಷಾ (40) ಹತ್ಯೆಗೊಳಗಾದ ವ್ಯಕ್ತಿ. ಅರ್ಬಾಜ್ ಪಾಷಾ ಮತ್ತು ಸಹೋದರ ಇಬ್ಬರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸಾದಿಲ್ ಪಾದರಾಯನಪುರದ ಮನೆಯ ಸಮೀಪ ಗ್ಯಾರೇಜ್ ಇಟ್ಟುಕೊಂಡಿದ್ದು, ಅರ್ಬಾಜ್ ಪಾಷಾ ಆತನ ಪತ್ನಿಯ ಮೇಲೆ ಕಣ್ಣು ಹಾಕಿದ್ದು ಸಲುಗೆ ಬೆಳೆಸಿಕೊಂಡಿದ್ದ. ಇದನ್ನು ಗಮನಿಸಿದ ಸಾದಿಲ್ ಕರೆದು ಎಚ್ಚರಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಾದಿಲ್ ಹತ್ಯೆಗೆ ಸೋದರದ ಜೊತೆಗೂಡಿ ಅರ್ಬಾಜ್ ಪ್ಲಾನ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments