Webdunia - Bharat's app for daily news and videos

Install App

ಬಾನಲ್ಲೇ ಮಧುಚಂದ್ರಕೆ ಸಿನಿಮಾ ಶೈಲಿಯಲ್ಲಿ ಪತ್ನಿಯನ್ನು ಕೊಂದ ಪಾಪಿ ಪತಿ..!!!!

Webdunia
ಬುಧವಾರ, 17 ಆಗಸ್ಟ್ 2022 (17:45 IST)
ಬಾನಲ್ಲೇ ಮಧುಚಂದ್ರಕೆ ಎಂಬ ಸಿನಿಮಾ ಶೈಲಿಯಲ್ಲಿ ಪತ್ನಿಯನ್ನು ಪ್ರವಾಸಕ್ಕೆ ಕರೆದೊಯ್ದ ಕಾರಿನಲ್ಲೇ ಸ್ನೇಹಿತನ ಜೊತೆ ಸೇರಿ ವೇಲ್‍ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಆರೋಪಿ ಪತಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೃಥ್ವಿರಾಜ್(30) ಬಂಧಿತ ಆರೋಪಿ.
 
ತಲೆಮರೆಸಿಕೊಂಡಿರುವ ಈತನ ಸ್ನೇಹಿತ, ಬಿಹಾರ ಮೂಲದ ಸಮೀರ್ ಕುಮಾರ್‍ನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ. ಬಿಕಾಂ ಪದವೀಧರೆ ಜ್ಯೋತಿಕುಮಾರಿ(38) ಯುಪಿಎಸ್‍ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಆ ಸಂದರ್ಭದಲ್ಲೇ ಪೃಥ್ವಿರಾಜ್‍ನನ್ನು ಪ್ರೀತಿಸಿ ಕಳೆದ ನವೆಂಬರ್‍ನಲ್ಲಿ ವಿವಾಹವಾಗಿದ್ದರು. ಇವರ ಮಧ್ಯೆ ವಯಸ್ಸಿನ ಅಂತರವಿತ್ತು. ಅಲ್ಲದೆ ದಂಪತಿ ನಡುವೆ ವೈಷಮ್ಯ ಉಂಟಾಗಿದೆ.
 
ಪತ್ನಿಯನ್ನು ಕೊಲೆ ಮಾಡಲು ನಿರ್ಧರಿಸಿದ ಪೃಥ್ವಿರಾಜ್ ಹಲವು ಯೋಜನೆಗಳನ್ನು ಹಾಕಿಕೊಂಡು ಆಕೆಯ ಮನವೊಲಿಸಿ ಹಾಲಿಡೇ ಟ್ರಿಪ್‍ಗೆ ಹೋಗಬೇಕೆಂದು ಹೇಳಿ ಪ್ರವಾಸಕ್ಕೆ ಒಪ್ಪಿಸಿದ್ದಾನೆ. ಆ.1ರಂದು ಝೂಮ್ ಕಾರನ್ನು ಬಾಡಿಗೆಗೆ ಪಡೆದುಕೊಂಡು ಪತ್ನಿ ಹಾಗೂ ಸ್ನೇಹಿತ ಸಮೀರ್‍ಕುಮಾರ್‍ನನ್ನು ಜೊತೆಗೆ ಕರೆದುಕೊಂಡು ಉಡುಪಿ ಬಳಿಯ ಮಲ್ಪೆ ಬೀಚ್‍ಗೆ ಹೋಗಿದ್ದಾನೆ.
 
ಅಲ್ಲಿನ ಹೋಟೆಲ್‍ವೊಂದರಲ್ಲಿ ರೂಂ ಪಡೆದುಕೊಂಡಿದ್ದು, ಹೋಟೆಲ್‍ನಲ್ಲಿ ಪತ್ನಿಯನ್ನು ಸಾಯಿಸಲು ಆಗಿಲ್ಲ. ನಂತರ ಮಲ್ಪೆ ಬೀಚ್‍ಗೆ ಹೋದಾಗ ಸಮುದ್ರದಲ್ಲಿ ಮುಳುಗಿಸಿ ಕೊಲೆ ಮಾಡಲು ಸಂಚು ರೂಪಿಸಿದ್ದ. ಆದರೆ ಆ ಸ್ಥಳದಲ್ಲೂ ಅದು ಸಾಧ್ಯವಾಗಿಲ್ಲ.
 
ತದನಂತರ ಆ.2ರಂದು ಮಲ್ಪೆಯಿಂದ ಬೆಂಗಳೂರಿಗೆ ವಾಪಸ್ ಬರುವಾಗ ಮಾರ್ಗ ಮಧ್ಯದ ಶಿರಾಡಿಘಾಟ್‍ನ ರಾಜಘಟ್ಟದ ಬಳಿ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಜ್ಯೋತಿಕುಮಾರಿಯ ವೇಲ್‍ನಿಂದ ಕುತ್ತಿಗೆ ಬಿಗಿದು ಸ್ನೇಹಿತನ ನೆರವಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಾನೆ.
 
ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಅರಣ್ಯ ಪ್ರದೇಶದಲ್ಲಿ ಬಿಸಾಕಿ, ಸಾಕ್ಷ್ಯ ನಾಶಪಡಿಸಿ ವಾಪಸ್ ಬೆಂಗಳೂರಿಗೆ ಬಂದು, ಪತ್ನಿ ಕಾಣೆಯಾಗಿದ್ದಾಳೆ ಎಂದು ಮಡಿವಾಳ ಠಾಣೆ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡ ಪೊಲೀಸರಿಗೆ ಪೃಥ್ವಿರಾಜ್ ಮೇಲೆಯೇ ಶಂಕೆ ವ್ಯಕ್ತವಾಗಿದೆ. ಆತನ ನಡವಳಿಕೆಯ ಬಗ್ಗೆ ಅನುಮಾನ ಬಂದು ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ, ಪ್ರವಾಸಕ್ಕೆ ಕರೆದೊಯ್ದು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments