ಸಾಲ ತೀರಿಸದ ಸ್ನೇಹಿತನ ಪತ್ನಿಯನ್ನೇ ಮದುವೆಯಾದ! ಪತ್ನಿಗಾಗಿ ಈಗ ಪತಿಯ ಮೊರೆ

Webdunia
ಗುರುವಾರ, 27 ಸೆಪ್ಟಂಬರ್ 2018 (09:26 IST)
ಬೆಳಗಾವಿ: 500 ರೂ. ಸಾಲ ತೀರಿಸದ್ದಕ್ಕೆ ಸ್ನೇಹಿತನ ಪತ್ನಿಯನ್ನೇ ಮದುವೆಯಾದ ಪ್ರಕರಣವೊಂದು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಸಂಬಂಧ ಇದೀಗ ಪೊಲೀಸರು ದಂಪತಿ ನಡುವೆ ರಾಜಿ ಸಂಧಾನ ನಡೆಸಲು ಸಲಹೆ ನೀಡಿದ್ದಾರೆ.  ಆದರೆ ಇದೀಗ ಪತ್ನಿ ಪಾರ್ವತಿ ಮೊದಲ ಪತಿಯೊಂದಿಗೆ ಹೋಗಲು ಒಪ್ಪುತ್ತಿಲ್ಲ. ಇತ್ತ ಮೊದಲ ಪತಿ ತನಗೆ ಪತ್ನಿ ಬೇಕೆಂದು ಪೊಲೀಸರ ಮುಂದೆ ಮೊರೆಯಿಡುತ್ತಿದ್ದಾನೆ.

ಬಸವರಾಜ ಕೋನನ್ನವರ ಮತ್ತು ರಮೇಶ ಉಡಕೇರಿ ಎಂಬಿಬ್ಬರು ಸ್ನೇಹಿತರು ಬೆಳಗಾವಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬಸವರಾಜ ರಮೇಶನಿಂದ 500 ರೂ. ಸಾಲ ಪಡೆದಿದ್ದ.

ಆದರೆ ಸಾಲ ಪಾವತಿಸದ ಕಾರಣ ಅದೇ ನೆಪವೊಡ್ಡಿ ರಮೇಶ ಎರಡು ತಿಂಗಳ ಹಿಂದೆ ಬಸವರಾಜನ ಪತ್ನಿ ಪಾರ್ವತಿಯನ್ನು ಪುಸಲಾಯಿಸಿ ಮದುವೆಯಾಗಿದ್ದ ಎನ್ನುವುದು ಆರೋಪ. ಈ ಬಗ್ಗೆ ಬಸವರಾಜ ಪೊಲೀಸರಿಗೆ ದೂರು ನೀಡಿದಾಗ ಪೊಲೀಸರು ಪತ್ನಿಯನ್ನೂ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪಾರ್ವತಿ ಮೊದಲ ಪತಿ ಬಸವರಾಜನೊಂದಿಗೆ ಹೋಗಲು ನಿರಾಕರಿಸಿದ್ದಾಳೆ. ಹೀಗಾಗಿ ಇದೊಂದು ಕೌಟುಂಬಿಕ ಕಲಹವಾಗಿದ್ದು, ನೀವೇ ಪರಿಹರಿಸಿಕೊಳ್ಳಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments