ಸ್ವಾಭಿಮಾನಕ್ಕೆ ಸಾಕ್ಷಿ" ಕರ್ನಾಟಕದ ಅಚ್ಚರಿ ಸಂಗತಿ ...!!!!!!

Webdunia
ಶುಕ್ರವಾರ, 29 ಜುಲೈ 2022 (15:56 IST)
ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಪುಟ್ಟನಂಜಪ್ಪ (85) ಎಂಬವರು ಇಂದು ದೈವಾಧೀನರಾಗಿದ್ದು ಇವರು 20 ವರ್ಷಗಳ ಹಿಂದೆಯೇ ತಮ್ಮ ಜಮೀನಿನಲ್ಲಿ ತಾವೇ ಕುಳಿತು ಅಳತೆ ಮಾಡಿ ಗೋಪುರ ಶೈಲಿಯ ಸಮಾಧಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ, ಅಂತ್ಯ ಸಂಸ್ಕಾರಕ್ಕೆ ಬೇಕಾದ ವಿಭೂತಿ, ಕಳಶಗಳು, ಒಂದು ಲಕ್ಷ ರೂ.ನ್ನೂ ಎತ್ತಿಟ್ಟಿದ್ದು, ಆ ಹಣದಲ್ಲೇ ಅಂತ್ಯಕ್ರಿಯೆ ನೆರವೇರುತ್ತಿದೆ.ಪುಟ್ಟಮಲ್ಲಪ್ಪ ಅವರು ಸಾಕಷ್ಟು ಸ್ಥಿತಿವಂತರೇ ಆಗಿದ್ದು ಮೂರು ಪುತ್ರರಿದ್ದಾರೆ‌.ತನ್ನ ತಿಥಿಯನ್ನು ತನ್ನ ಹಣದಲ್ಲೇ ಮಾಡಬೇಕೆಂಬ ಸ್ವಾಭಿಮಾನದಿಂದಾಗಿ ಸಮಾಧಿ ನಿರ್ಮಾಣ ಹಾಗೂ ಹಣ ಎತ್ತಿಟ್ಟಿದ್ದರು‌ ಎಂದು ಕುಟುಂಬಸ್ಥರು ತಿಳಿಸಿದರು.
 
ಮೃತಪಟ್ಟ ಬಳಿಕ ಸಮಾಧಿ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ತಾನು ಯಾರಿಗೂ ತೊಂದರೆ ಕೊಡಬಾರದು, ತಾನು ದುಡಿದ ಹಣದಲ್ಲೇ ತನ್ನ ಅಂತಿಮ ವಿಧಿ-ವಿಧಾನ ನೆರವೇರಬೇಕೆಂದು ಇಚ್ಚಿಸಿ 20 ವರ್ಷಗಳ ಹಿಂದೆಯೇ ಸಮಾಧಿ ನಿರ್ಮಿಸಿಕೊಂಡಿದ್ದು ಅಲ್ಲೇ ಇಂದು ಅಂತಿಮ ವಿಧಿ ವಿಧಾನ ನೆರವೇರುತ್ತಿದೆ.
 
ಪುಟ್ಟಮಲ್ಲಪ್ಪ ಅವರ ಪತ್ನಿ ಕಳೆದ ವರ್ಷ ಕೊರೊನಾದಲ್ಲಿ ಮೃತಪಟ್ಟಿದ್ದು ಅವರ ಅಂತ್ಯ ಸಂಸ್ಕಾರವನ್ನು ಮಕ್ಕಳಿಂದ ಹಣ ಪಡೆಯದೇ ತಾವೇ ನೆರವೇರಿಸಿದ್ದರು‌.ಅಂತ್ಯಸಂಸ್ಕಾರಕ್ಕೆ ಬೇಕಾದ ಪ್ರತಿಯೊಂದನ್ನು ತಂದಿಟ್ಟಿದ್ದರು.ಕಳೆದ 12 ದಿನಗಳಿಂದ ಅವರ ಆರೋಗ್ಯ ಹದಗೆಟ್ಟು 5 ದಿನಗಳಿಂದ ಮಾತು ನಿಂತಿತ್ತು, ಭಾನುವಾರ ಸಂಜೆ ತಂದೆಯವರು ಅಸುನೀಗಿದ್ದು ಇಂದು ಅವರು ನಿರ್ಮಿಸಿಕೊಂಡ ಸಮಾಧಿಯಲ್ಲೇ, ಅವರು ಎತ್ತಿಟ್ಟಿದ್ದ ಹಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ ಎಂದು ಪುತ್ರ ಗೌಡಿಕೆ ನಾಗೇಶ್ ತಿಳಿಸಿದರು...

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments