Webdunia - Bharat's app for daily news and videos

Install App

ಸ್ವಾಭಿಮಾನಕ್ಕೆ ಸಾಕ್ಷಿ" ಕರ್ನಾಟಕದ ಅಚ್ಚರಿ ಸಂಗತಿ ...!!!!!!

Webdunia
ಶುಕ್ರವಾರ, 29 ಜುಲೈ 2022 (15:56 IST)
ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಪುಟ್ಟನಂಜಪ್ಪ (85) ಎಂಬವರು ಇಂದು ದೈವಾಧೀನರಾಗಿದ್ದು ಇವರು 20 ವರ್ಷಗಳ ಹಿಂದೆಯೇ ತಮ್ಮ ಜಮೀನಿನಲ್ಲಿ ತಾವೇ ಕುಳಿತು ಅಳತೆ ಮಾಡಿ ಗೋಪುರ ಶೈಲಿಯ ಸಮಾಧಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಜೊತೆಗೆ, ಅಂತ್ಯ ಸಂಸ್ಕಾರಕ್ಕೆ ಬೇಕಾದ ವಿಭೂತಿ, ಕಳಶಗಳು, ಒಂದು ಲಕ್ಷ ರೂ.ನ್ನೂ ಎತ್ತಿಟ್ಟಿದ್ದು, ಆ ಹಣದಲ್ಲೇ ಅಂತ್ಯಕ್ರಿಯೆ ನೆರವೇರುತ್ತಿದೆ.ಪುಟ್ಟಮಲ್ಲಪ್ಪ ಅವರು ಸಾಕಷ್ಟು ಸ್ಥಿತಿವಂತರೇ ಆಗಿದ್ದು ಮೂರು ಪುತ್ರರಿದ್ದಾರೆ‌.ತನ್ನ ತಿಥಿಯನ್ನು ತನ್ನ ಹಣದಲ್ಲೇ ಮಾಡಬೇಕೆಂಬ ಸ್ವಾಭಿಮಾನದಿಂದಾಗಿ ಸಮಾಧಿ ನಿರ್ಮಾಣ ಹಾಗೂ ಹಣ ಎತ್ತಿಟ್ಟಿದ್ದರು‌ ಎಂದು ಕುಟುಂಬಸ್ಥರು ತಿಳಿಸಿದರು.
 
ಮೃತಪಟ್ಟ ಬಳಿಕ ಸಮಾಧಿ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ತಾನು ಯಾರಿಗೂ ತೊಂದರೆ ಕೊಡಬಾರದು, ತಾನು ದುಡಿದ ಹಣದಲ್ಲೇ ತನ್ನ ಅಂತಿಮ ವಿಧಿ-ವಿಧಾನ ನೆರವೇರಬೇಕೆಂದು ಇಚ್ಚಿಸಿ 20 ವರ್ಷಗಳ ಹಿಂದೆಯೇ ಸಮಾಧಿ ನಿರ್ಮಿಸಿಕೊಂಡಿದ್ದು ಅಲ್ಲೇ ಇಂದು ಅಂತಿಮ ವಿಧಿ ವಿಧಾನ ನೆರವೇರುತ್ತಿದೆ.
 
ಪುಟ್ಟಮಲ್ಲಪ್ಪ ಅವರ ಪತ್ನಿ ಕಳೆದ ವರ್ಷ ಕೊರೊನಾದಲ್ಲಿ ಮೃತಪಟ್ಟಿದ್ದು ಅವರ ಅಂತ್ಯ ಸಂಸ್ಕಾರವನ್ನು ಮಕ್ಕಳಿಂದ ಹಣ ಪಡೆಯದೇ ತಾವೇ ನೆರವೇರಿಸಿದ್ದರು‌.ಅಂತ್ಯಸಂಸ್ಕಾರಕ್ಕೆ ಬೇಕಾದ ಪ್ರತಿಯೊಂದನ್ನು ತಂದಿಟ್ಟಿದ್ದರು.ಕಳೆದ 12 ದಿನಗಳಿಂದ ಅವರ ಆರೋಗ್ಯ ಹದಗೆಟ್ಟು 5 ದಿನಗಳಿಂದ ಮಾತು ನಿಂತಿತ್ತು, ಭಾನುವಾರ ಸಂಜೆ ತಂದೆಯವರು ಅಸುನೀಗಿದ್ದು ಇಂದು ಅವರು ನಿರ್ಮಿಸಿಕೊಂಡ ಸಮಾಧಿಯಲ್ಲೇ, ಅವರು ಎತ್ತಿಟ್ಟಿದ್ದ ಹಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ ಎಂದು ಪುತ್ರ ಗೌಡಿಕೆ ನಾಗೇಶ್ ತಿಳಿಸಿದರು...

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments