Publish Date: Thu, 04 Jun 2026 (20:41 IST)
Updated Date: Thu, 04 Jun 2026 (20:43 IST)
ಬೆಂಗಳೂರು: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ.
ಅಕ್ರಂ ಪಾಷಾ (43) ಕೊಲೆಯಾದ ವ್ಯಕ್ತಿ. ಉಮರ್ ಖಾಲೀದ್ ಎಂಬವರ ಪತ್ನಿಯ ಜೊತೆ ಅಕ್ರಂನ ಪಾಷಾ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪವಿದೆ.ಬುಧವಾರ ರಾತ್ರಿ ಅಕ್ರಂ ಪಾಷಾ ಉಮರ್ ಖಾಲಿದ್ ಮನೆ ಬಳಿ ಬಂದಿದ್ದ. ಈ ವೇಳೆ ಉಮರ್ ಖಾಲಿದ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಕೊಲೆ ಪ್ರಕರಣ ಸಂಬಂಧ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್ ಪ್ರತಿಕ್ರಿಯಿಸಿ, ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸುಮಾರು 12:30ಕ್ಕೆ ಹಲ್ಲೆ ಆಗಿದೆ ಎಂದು ಮಾಹಿತಿ ಬಂದಿದೆ. ಮಾಹಿತಿ ಆಧರಿಸಿ ಪೊಲೀಸ್ ಹೋಗಿ ನೋಡಿದಾಗ ಓರ್ವ ವ್ಯಕ್ತಿ ಮೇಲೆ ಹಲ್ಲೆ ಆಗಿರುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಕ್ರಂ ಪಾಷಾ ಸಾವನ್ನಪ್ಪಿರುವುದಾಗಿ ಮಾಹಿತಿ ನೀಡಿದರು.
ಅಕ್ರಂ ಪಾಷಾ ಹಾಗೂ ಉಮರ್ ಖಾಲಿದ್ ಕಾರು ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಅಕ್ರಮ ಸಂಬಂಧ ವಿಚಾರವಾಗಿ ಆರೋಪಿ ಅಕ್ರಂ ಪಾಷಾ ಮೇಲೆ ಹಲ್ಲೆ ಮಾಡಿದ್ದ. ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ