Webdunia - Bharat's app for daily news and videos

Install App

ಟ್ರಾಫಿಕ್ ಜಂಕ್ಷನ್‌ನಲ್ಲಿ ಮೂತ್ರ ಮಾಡಿದ ವ್ಯಕ್ತಿ: ದಯವಿಟ್ಟು ಇದೊಂದು ಬಾರಿ ಬಿಟ್ಟುಬಿಡಿ ಅಂಗಲಾಚಿದ BMW ಡ್ರೈವರ್‌

Sampriya
ಭಾನುವಾರ, 9 ಮಾರ್ಚ್ 2025 (18:38 IST)
Photo Courtesy X
ಪುಣೆ: ಪುಣೆಯ ಟ್ರಾಫಿಕ್ ಜಂಕ್ಷನ್‌ನಲ್ಲಿ ತನ್ನ BMW ಕಾರಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡಿ, ಭಾರೀ ಟ್ರೋಲ್‌ಗೆ ಒಳಗಾದ ಗೌರವ್ ಅಹುಜಾ ಎನ್ನುವ ವ್ಯಕ್ತಿ ಇದೀಗ ಕ್ಷಮೆಯಾಚಿಸಿ, ವಿಡಿಯೋ ಶೇರ್ ಮಾಡಿದ್ದಾನೆ. ವಿಡಿಯೋದಲ್ಲಿ ತಾನು ಮಾಡಿದ ಕೃತ್ಯದಿಂದ ನನಗೆ ನಾಚಿಕೆಯಾಗಿದೆ ಎಂದು ಹೇಳಿದ್ದಾನೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಆ ವ್ಯಕ್ತಿ ಪುಣೆಯ ಜನರಿಗೆ, ಮಹಾರಾಷ್ಟ್ರದ ಜನರಿಗೆ, ಇಡೀ ಭಾರತಕ್ಕೆ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು.

"ನಾನು ಗೌರವ್ ಅಹುಜಾ, ಪುಣೆಯಲ್ಲಿ ವಾಸಿಸುತ್ತಿದ್ದೇನೆ, ನಿನ್ನೆಯ ಕೃತ್ಯಕ್ಕೆ ನನಗೆ ತುಂಬಾ ನಾಚಿಕೆಯಾಗಿದೆ, ಅದನ್ನು ನಾನೇ ಮಾಡಿದ್ದೇನೆ" ಎಂದು ತಪ್ಪೊಪ್ಪಿಕೊಂಡಿದ್ದಾನೆ,.

"ನಾನು ಪುಣೆ, ಮಹಾರಾಷ್ಟ್ರ ಮತ್ತು ಭಾರತದ ಎಲ್ಲಾ ಜನರಿಗೆ ನಿಜವಾಗಿಯೂ ಕ್ಷಮೆಯಾಚಿಸುತ್ತೇನೆ ಮತ್ತು ನಾನು ಪೊಲೀಸ್ ಇಲಾಖೆ ಮತ್ತು [ಏಕ್ನಾಥ್] ಶಿಂಧೆ ಸಾಹಿಬ್‌ಗೆ ನಿಜವಾಗಿಯೂ ಕ್ಷಮೆಯಾಚಿಸುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಮತ್ತು ನನಗೆ ಒಂದು ಅವಕಾಶ ನೀಡಿ,  ಈ ತಪ್ಪು ಮುಂದಿನ ಮರುಕಳಿಸುವುದಿಲ್ಲ. ನನಗೆ ನಿಜವಾಗಿಯೂ ವಿಷಾದವಿದೆ ಎಂದು ಕೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments