ಟಿಪ್ಪು ಸುಲ್ತಾನ್ ಫೋಟೋಗೆ ಅವಮಾನ ಮಾಡಿದ ವ್ಯಕ್ತಿ ಅರೆಸ್ಟ್

Krishnaveni K
ಶುಕ್ರವಾರ, 2 ಫೆಬ್ರವರಿ 2024 (11:00 IST)
ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಅವಮಾನ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಮಂಡ್ಯದಲ್ಲಿ ಹನುಮ ಧ್ವಜ ತೆರವುಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹಿಂದೂ ಸಂಘಟನೆಗಳಿಂದ ಮತ್ತು ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬಗ್ಗೆ ಭಾರೀ ಪ್ರತಿಭಟನೆಗಳೇ ನಡೆದಿದ್ದವು. ಇದು ಹಲವೆಡೆ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದವು.

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ
ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತೀಕಾರ ತೀರಿಸಿದ್ದರು. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದನ್ನು ನೋಡಿ ಮುಸ್ಲಿಮರು ತೀವ್ರ ಆಕ್ರೋಶ ಹೊರಹಾಕಿದ್ದರು. ಇದರ ವಿರುದ್ಧ ಭಾರೀ ಪ್ರತಿಭಟನೆಯೂ ನಡೆಯಿತು. ಒಟ್ಟಾರೆಯಾಗಿ ಈ ಘಟನೆ ಹಿಂದೂ-ಮುಸ್ಲಿಮರ ನಡುವೆ ಕಾದಾಟಕ್ಕೆ ಕಾರಣವಾಯಿತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎರಡು ತಂಡಗಳನ್ನು ರಚಿಸಿ ಆರೋಪಿಗೆ ಬಲೆ ಬೀಸಿದ್ದರು. ಇದೀಗ ಪ್ರಕರಣ ಸಂಬಂಧ ಆಕಾಶ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಬಂಧನ ನಡೆಸಲಾಗಿದೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಜೋರಾಗಿದೆ ಹಸಿರು ವರ್ಸಸ್ ಕೇಸರಿ ದಂಗಲ್
ಹನುಮ ಧ್ವಜ ತೆರವು ಪ್ರಕರಣದ ನಂತರ ರಾಜ್ಯದಲ್ಲಿ ಹಸಿರು ವರ್ಸಸ್ ಕೇಸರಿ ಕಾದಾಟ ಜೋರಾಗಿದೆ. ಹಿಂದೂ ಧರ್ಮದ ಸಂಕೇತವಾದ ಕೇಸರಿ ಧ್ವಜವನ್ನು ತೆರವುಗೊಳಿಸಿದ ಬೆನ್ನಲ್ಲೇ ಮುಸ್ಲಿಂ ಧರ್ಮದ ಸಂಕೇತವಾದ ಹಸಿರು ಧ್ವಜವನ್ನೂ ಕಿತ್ತು ಹಾಕಬೇಕೆಂದು ಹಲವೆಡೆ ಒತ್ತಾಯ, ಪ್ರತಿಭಟನೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments