ಬಾರ್ ಲೈಸೆನ್ಸ್ ಗೆ ಚೆಲುವರಾಯಸ್ವಾಮಿ ನೇತೃತ್ವದಲ್ಲೇ ಲಂಚ: ಮೋದಿ ಹೇಳಿದ ಮಾತು ಸತ್ಯವಾಯ್ತು

Krishnaveni K
ಶುಕ್ರವಾರ, 29 ನವೆಂಬರ್ 2024 (10:20 IST)
ಮಂಡ್ಯ: ಬಾರ್ ಗೆ ಲೈಸೆನ್ಸ್ ನೀಡಲು ಲಂಚ ಪಡೆದ ಆರೋಪದಲ್ಲಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿದ್ದು, ಅಂದು ಪ್ರಧಾನಿ ಮೋದಿ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ನೀಡಿದ್ದ ಹೇಳಿಕೆ ಸತ್ಯವೆಂದು ಅನಿಸುತ್ತಿದೆ.

ಮಂಡ್ಯದ ಚಂದೂಪರದಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ಗೆ ಲೈಸೆನ್ಸ್ ನೀಡಲು ಲಂಚ ಪಡೆಯಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಈ ಸಂಬಂಧ ದೂರುದಾರರು ಅಡಿಯೋ ಮತ್ತು  ವಿಡಿಯೋ ತುಣುಕನ್ನೂ ನೀಡಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಈ ಅಡಿಯೋದಲ್ಲಿ ಸಚಿವ ಚೆಲುವರಾಯಸ್ವಾಮಿಯ ಹೆಸರು ಪ್ರಸ್ತಾಪವಾಗಿದೆ. ಅವರ ನೇತೃತ್ವದಲ್ಲೇ ಲಂಚ ಪಡೆಯಲಾಗುತ್ತಿದೆ ಎಂದು ಆರೋಪವಿದೆ. ಸಚಿವರ ಮುಂದಾಳತ್ವದಲ್ಲೇ ಲೈಸೆನ್ಸ್ ಪಡೆಯಲು ಲಂಚದ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಈಗ ಎಫ್ಐಆರ್ ದಾಖಲಾದರೆ ಸಚಿವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಮಾಸಿಕವಾಗಿ ಇಂತಿಷ್ಟು ಎಂದು ವಸೂಲಿ ದಂಧೆ ನಡೆಯುತ್ತಿದೆ ಎಂದಿದ್ದರು. ಒಂದು ವೇಳೆ ಈಗ ಚೆಲುವರಾಯಸ್ವಾಮಿ ವಿರುದ್ಧ ಆರೋಪ ನಿಜವಾದರೆ ಮೋದಿ ಹೇಳಿದ ಮಾತು ಸತ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments